ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

Published : Sep 27, 2023, 02:27 PM IST

ಕಾವೇರಿಗಾಗಿ ಕೆರಳಿದೆ ಕರುನಾಡು.. ಧಗಧಗಿಸುತ್ತಿದೆ ಆಕ್ರೋಶದ ಕಿಚ್ಚು..!
ಕಾವೇರಿ ನಮ್ಮದು..ಹೋರಾಟವೂ ನಮ್ಮದು..ಆದರೂ ಯಾಕೆ ಈ ಪ್ರತಿಷ್ಠೆ..?
ಒಗ್ಗಟ್ಟು ಇರಬೇಕಾದ ಜಾಗದಲ್ಲಿ ಇದೆಂಥಾ ಇಕ್ಕಟ್ಟು..ಇದೆಂಥಾ ಬಿಕ್ಕಟ್ಟು..?

ಬೆಂಗಳೂರು ಬಂದ್ ಆಯ್ತು. ಶುಕ್ರವಾರ ಕರ್ನಾಟಕ ಬಂದ್(karnataka bandh). ಇಲ್ಲಿ ಕಾವೇರಿ ನೀರಿಗಾಗಿ ಹಾಹಾಕಾರ. ಅಲ್ಲಿ ಹೋರಾಟಗಾರರ ಮಧ್ಯೆ ಅಪಸ್ವರ. ದೆಹಲಿಯಲ್ಲಿ ರಾಜ್ಯಕ್ಕೆ ಮತ್ತೆ ಕಾವೇರಿ ಬರೆ. ಕಾವೇರಿ ನೀರಿಗಾಗಿ ಒಟ್ಟಾಗಿ ಧ್ವನಿ ಎತ್ತಬೇಕಾದವರ ಮಧ್ಯೆ ಬಿಕ್ಕಟ್ಟು ಏರ್ಪಟ್ಟಂತೆ ಕಾಣುತ್ತಿದೆ. ಇದು ಕಾವೇರಿ(Cauvery) ನೀರಿರಾಗಿ, ತಮಿಳುನಾಡಿಗೆ ಹರಿದು ಹೋಗುತ್ತಿರುವ ಕಾವೇರಿಯನ್ನು ಉಳಿಸಿಕೊಳ್ಳೋದಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮೊಳಗಿದ ಕಾವೇರಿ ಕಹಳೆ. “ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು” ಈ ಸಂಘಟನೆಯ ನೇತೃತ್ವದಲ್ಲಿ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಬೆಂಗಳೂರು ಬಂದ್ ನಡೀತು. ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾರಿಗೆ, ಶಿಕ್ಷಕರ ಸಂಘಟನೆಗಳು ಸೇರಿದಂತೆ 150ಕ್ಕೂ ಹೆಚ್ಚಿನ ಸಂಘಟನೆಗಳು ರಾಜಧಾನಿ ಬಂದ್'ಗೆ ಬೆಂಬಲ ಕೊಟ್ಟಿದ್ವು. ಆದ್ರೆ ಕನ್ನಡದ ಪರ, ಕರ್ನಾಟಕದ ಪರ, ನಾಡು ನುಡಿ, ನೆಲ ಜಲದ ವಿಚಾರದಲ್ಲಿ ಧ್ವನಿ ಎತ್ತುವ ಕನ್ನಡ ಹೋರಾಟಗಾರರು ಬೆಂಗಳೂರು ಬಂದ್"ನಿಂದ ದೂರ ಉಳಿದಿದ್ರು. ಆದರೆ ಕನ್ನಡಪರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ.. ಹೀಗೆ ರಾಜ್ಯದ ಪ್ರಮುಖ ಸಂಘಟನೆಗಳು ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದ್ವೇ ಹೊರತು, ಬಂದ್‌ಗೆ ಬೆಂಬಲ ಕೊಡ್ಲಿಲ್ಲ. ಅದ್ರಲ್ಲೂ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದೆ. ಇದು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳ ಮಧ್ಯೆ ಇರೋ ಪ್ರತಿಷ್ಠೆಯ ಪರಿಣಾಮ. ಮಂಗಳವಾರ ನಡೆದ ಬೆಂಗಳೂರು ಬಂದ್'ಗೆ ಎಲ್ಲಾ ಸಂಘಟನೆಗಳು ಬೆಂಬಲ ಕೊಟ್ಟಿರ್ಲಿಲ್ಲ. ಸಂಘಟನೆಗಳ ನಡುವಿನ ತಿಕ್ಕಾಟದ ಕಾರಣ ಒಗ್ಗಟ್ಟಿರಬೇಕಾದ ಜಾಗದಲ್ಲಿ ಬಿಕ್ಕಟ್ಟು ಎದುರಾಯ್ತು. 

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more