ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

Published : Sep 27, 2023, 02:27 PM IST

ಕಾವೇರಿಗಾಗಿ ಕೆರಳಿದೆ ಕರುನಾಡು.. ಧಗಧಗಿಸುತ್ತಿದೆ ಆಕ್ರೋಶದ ಕಿಚ್ಚು..!
ಕಾವೇರಿ ನಮ್ಮದು..ಹೋರಾಟವೂ ನಮ್ಮದು..ಆದರೂ ಯಾಕೆ ಈ ಪ್ರತಿಷ್ಠೆ..?
ಒಗ್ಗಟ್ಟು ಇರಬೇಕಾದ ಜಾಗದಲ್ಲಿ ಇದೆಂಥಾ ಇಕ್ಕಟ್ಟು..ಇದೆಂಥಾ ಬಿಕ್ಕಟ್ಟು..?

ಬೆಂಗಳೂರು ಬಂದ್ ಆಯ್ತು. ಶುಕ್ರವಾರ ಕರ್ನಾಟಕ ಬಂದ್(karnataka bandh). ಇಲ್ಲಿ ಕಾವೇರಿ ನೀರಿಗಾಗಿ ಹಾಹಾಕಾರ. ಅಲ್ಲಿ ಹೋರಾಟಗಾರರ ಮಧ್ಯೆ ಅಪಸ್ವರ. ದೆಹಲಿಯಲ್ಲಿ ರಾಜ್ಯಕ್ಕೆ ಮತ್ತೆ ಕಾವೇರಿ ಬರೆ. ಕಾವೇರಿ ನೀರಿಗಾಗಿ ಒಟ್ಟಾಗಿ ಧ್ವನಿ ಎತ್ತಬೇಕಾದವರ ಮಧ್ಯೆ ಬಿಕ್ಕಟ್ಟು ಏರ್ಪಟ್ಟಂತೆ ಕಾಣುತ್ತಿದೆ. ಇದು ಕಾವೇರಿ(Cauvery) ನೀರಿರಾಗಿ, ತಮಿಳುನಾಡಿಗೆ ಹರಿದು ಹೋಗುತ್ತಿರುವ ಕಾವೇರಿಯನ್ನು ಉಳಿಸಿಕೊಳ್ಳೋದಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮೊಳಗಿದ ಕಾವೇರಿ ಕಹಳೆ. “ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು” ಈ ಸಂಘಟನೆಯ ನೇತೃತ್ವದಲ್ಲಿ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಬೆಂಗಳೂರು ಬಂದ್ ನಡೀತು. ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾರಿಗೆ, ಶಿಕ್ಷಕರ ಸಂಘಟನೆಗಳು ಸೇರಿದಂತೆ 150ಕ್ಕೂ ಹೆಚ್ಚಿನ ಸಂಘಟನೆಗಳು ರಾಜಧಾನಿ ಬಂದ್'ಗೆ ಬೆಂಬಲ ಕೊಟ್ಟಿದ್ವು. ಆದ್ರೆ ಕನ್ನಡದ ಪರ, ಕರ್ನಾಟಕದ ಪರ, ನಾಡು ನುಡಿ, ನೆಲ ಜಲದ ವಿಚಾರದಲ್ಲಿ ಧ್ವನಿ ಎತ್ತುವ ಕನ್ನಡ ಹೋರಾಟಗಾರರು ಬೆಂಗಳೂರು ಬಂದ್"ನಿಂದ ದೂರ ಉಳಿದಿದ್ರು. ಆದರೆ ಕನ್ನಡಪರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ.. ಹೀಗೆ ರಾಜ್ಯದ ಪ್ರಮುಖ ಸಂಘಟನೆಗಳು ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದ್ವೇ ಹೊರತು, ಬಂದ್‌ಗೆ ಬೆಂಬಲ ಕೊಡ್ಲಿಲ್ಲ. ಅದ್ರಲ್ಲೂ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದೆ. ಇದು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳ ಮಧ್ಯೆ ಇರೋ ಪ್ರತಿಷ್ಠೆಯ ಪರಿಣಾಮ. ಮಂಗಳವಾರ ನಡೆದ ಬೆಂಗಳೂರು ಬಂದ್'ಗೆ ಎಲ್ಲಾ ಸಂಘಟನೆಗಳು ಬೆಂಬಲ ಕೊಟ್ಟಿರ್ಲಿಲ್ಲ. ಸಂಘಟನೆಗಳ ನಡುವಿನ ತಿಕ್ಕಾಟದ ಕಾರಣ ಒಗ್ಗಟ್ಟಿರಬೇಕಾದ ಜಾಗದಲ್ಲಿ ಬಿಕ್ಕಟ್ಟು ಎದುರಾಯ್ತು. 

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more