Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Published : Dec 27, 2021, 05:35 PM ISTUpdated : Dec 27, 2021, 05:51 PM IST

ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಬೆಂಗಳೂರು (ಡಿ. 27): ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಮಲ್ಲೇಶ್ವರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದು, ವಾಟಾಳ್‌ ನಾಗರಾಜ್‌, ಕೆ.ಆರ್‌.ಕುಮಾರ್‌ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬಂದ್‌ ಕುರಿತು ಜಾಗೃತಿ ರ್ಯಾಲಿ ನಡೆಸಿದರು. ನಂತರ ಪ್ರಮುಖ ವೃತ್ತಗಳಲ್ಲಿ ಎಂಇಎಸ್‌ ಪುಂಡಾಟ ವಿರೋಧಿಸಿ ಭಾಷಣ ಮಾಡಿ ಸಾರ್ವಜನಿಕರ ಬೆಂಬಲ ಕೋರಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜ್‌, ಎಂಇಎಸ್‌ ಮತ್ತು ಶಿವಸೇನೆ ಪುಂಡರು ಕನ್ನಡ ಬಾವುಟವನ್ನು ಸುಟ್ಟಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ಆಸ್ತಿ ಹಾನಿ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಲಿದೆ. ಹೀಗಾಯೇ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆಕೊಟ್ಟಿರುವ ಬಂದ್‌ಗೆ ಬೆಂಬಲ ನೀಡಬೇಕು. ಇನ್ನು ನೆಪ ಮಾತ್ರಕ್ಕೆ ನೀಡುವ ನೈತಿಕ ಬೆಂಬಲ ಬೇಡ, ಸಂಪೂರ್ಣ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more