ಸಾಹುಕಾರ್‌ಗೆ ಬಿಗ್ ಶಾಕ್, ತಿರುಗಿ ಬಿದ್ದ ಸೀಡಿ ಯುವತಿಯಿಂದ ದೂರು!

ಸಾಹುಕಾರ್‌ಗೆ ಬಿಗ್ ಶಾಕ್, ತಿರುಗಿ ಬಿದ್ದ ಸೀಡಿ ಯುವತಿಯಿಂದ ದೂರು!

Published : Mar 26, 2021, 12:48 PM ISTUpdated : Mar 26, 2021, 01:45 PM IST

ಸೀಡಿ ಲೇಡಿ ಮೂರನೇ ವಿಡಿಯೋ ರಿಲೀಸ್ ಮಾಡಿ, ತಾನು ಇಂದು(ಶುಕ್ರವಾರ) ಮಧ್ಯಾಹ್ನ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಬೆಳಗಾವಿಯ ಸಾಹುಕಾರ್‌ಗೆ ಬಿಗ್ ಶಾಕ್ ನೀಡಿದೆ.

ಬೆಂಗಳೂರು(ಮಾ.26): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಒಂದೆಡೆ ಸಾಹುಕಾರ್ ವಿಡಿಯೋದಲ್ಲಿರುವುದು ತಾವಲ್ಲ, ತನ್ನ ವಿರುದ್ಧ ನಡೆದ ಷಡ್ಯಂತ್ರ ಎನ್ನುತ್ತಿದ್ದಾರೆ. ಇತ್ತ ಮತ್ತೊಂದೆಡೆ ಸಿಡಿ ಗ್ಯಾಂಗ್ ಕೂಡಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಇವೆಲ್ಲದರ ನಡುವೆಯೇ ಸಿಡಿಯಲ್ಲಿದ್ದ ಯುವತಿ ಎರಡು ಬಾರಿ ವಿಡಿಯೋ ರಿಲೀಸ್ ಮಾಡಿ ಸಂಚಲನ ಮೂಡಿಸಿದ್ದರು. ಆದರೀಗ ಮೂರನೇ ವಿಡಿಯೋ ರಿಲೀಸ್ ಮಾಡಿ, ತಾನು ಇಂದು(ಶುಕ್ರವಾರ) ಮಧ್ಯಾಹ್ನ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಬೆಳಗಾವಿಯ ಸಾಹುಕಾರ್‌ಗೆ ಬಿಗ್ ಶಾಕ್ ನೀಡಿದೆ.

SIT ಗೆ ಹೊಸ ನಂಬರ್ ಕೊಟ್ಟು ಯಾಮಾರಿಸಿದ್ರಾ ಜಾರಕಿಹೊಳಿ...?

ಹೌದು ಸೋಶಿಯಲ್ ಮಿಡಿಯಾದಲ್ಲಿ ಮೂರನೇ ಬಾರಿ ವಿಡಿಯೋ ಮೂಲಕ ಕಾಣಿಸಿಕೊಂಡಿರುವ ಯುವತಿ ತಾನು ಅಜ್ಞಾತವಾಸ ಮುಗಿಸಿ ಪೊಲೀಸರೆದುರು ಹಾಜರಾಗುತ್ತೇನೆ. ರಮೇಶ್ ಜಾರಕಿಹೊಳಿ ವಿರುದ್ಧ ವಕೀಲ ಜಗದೀಶ್ ಮೂಲಕ ಇವತ್ತು ಮಧ್ಯಾಹ್ನ ಎರಡು ಗಂಟೆಗೆ ದೂರು ನೀಡುತ್ತೇನೆ. 24 ದಿನದಿಂದ ಜೀವ ಭಯದಿಂದ ಬದುಕುತ್ತಿದ್ದೆ.  ಆದರೀಗ ಎಲ್ಲೋ ಒಂದು ಕಡೆ ಧೈರ್ಯ ಬಂದಿದೆ ಎಂದಿದ್ದಾರೆ.

2ನೇ ವಿಡಿಯೋ ರಿಲೀಸ್ ಮಾಡಿ ಪೊಲೀಸರಿಗೆ ಪ್ರಶ್ನೆ; ಹೊಸ ವರಸೆ ತೆಗೆದೆ CD ಯುವತಿ!

ಸದ್ಯ ಜಾರಕಿಹೊಳಿ ವಿರುದ್ಧವೇ ತಿರುಗಿ ಬಿದ್ದಿರುವ ಸೀಡಿ ಯುವತಿ, ದೂರಿನ ಪ್ರತಿ ಬರೆಯುತ್ತಿರುವ ಫೋಟೋ ಕೂಡಾ ಲಭ್ಯವಾಗಿದೆ. ಅದೇನಿದ್ದರೂ ಸದ್ಯ ಕಳೆದ ಸುಮಾರು ಒಂದು ತಿಂಗಳಿನಿಂದ ನಡೆಯುತ್ತಿರುವ ಈ ಹೈಡ್ರಾಮಾ ಇಂದು ತಾರ್ಕಿಕ ಅಂತ್ಯ ಕಾಣುತ್ತಾ ಅಥವಾ ಸಿಡಿ ಗ್ಯಾಂಗ್ ಹಾಗೂ ಯುವತಿ ತಮ್ಮ ಅಜ್ಞಾತವಾಸ ಮುಂದುವರೆಸುತ್ತಾರಾ ಎಂಬುವುದಕ್ಕೆ ಇಂದು ಮಧ್ಯಾಹ್ನ ಉತ್ತರ ಸಿಗಲಿದೆ.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!