ಸಾಹುಕಾರ್‌ಗೆ ಬಿಗ್ ಶಾಕ್, ತಿರುಗಿ ಬಿದ್ದ ಸೀಡಿ ಯುವತಿಯಿಂದ ದೂರು!

ಸಾಹುಕಾರ್‌ಗೆ ಬಿಗ್ ಶಾಕ್, ತಿರುಗಿ ಬಿದ್ದ ಸೀಡಿ ಯುವತಿಯಿಂದ ದೂರು!

Published : Mar 26, 2021, 12:48 PM ISTUpdated : Mar 26, 2021, 01:45 PM IST

ಸೀಡಿ ಲೇಡಿ ಮೂರನೇ ವಿಡಿಯೋ ರಿಲೀಸ್ ಮಾಡಿ, ತಾನು ಇಂದು(ಶುಕ್ರವಾರ) ಮಧ್ಯಾಹ್ನ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಬೆಳಗಾವಿಯ ಸಾಹುಕಾರ್‌ಗೆ ಬಿಗ್ ಶಾಕ್ ನೀಡಿದೆ.

ಬೆಂಗಳೂರು(ಮಾ.26): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಒಂದೆಡೆ ಸಾಹುಕಾರ್ ವಿಡಿಯೋದಲ್ಲಿರುವುದು ತಾವಲ್ಲ, ತನ್ನ ವಿರುದ್ಧ ನಡೆದ ಷಡ್ಯಂತ್ರ ಎನ್ನುತ್ತಿದ್ದಾರೆ. ಇತ್ತ ಮತ್ತೊಂದೆಡೆ ಸಿಡಿ ಗ್ಯಾಂಗ್ ಕೂಡಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಇವೆಲ್ಲದರ ನಡುವೆಯೇ ಸಿಡಿಯಲ್ಲಿದ್ದ ಯುವತಿ ಎರಡು ಬಾರಿ ವಿಡಿಯೋ ರಿಲೀಸ್ ಮಾಡಿ ಸಂಚಲನ ಮೂಡಿಸಿದ್ದರು. ಆದರೀಗ ಮೂರನೇ ವಿಡಿಯೋ ರಿಲೀಸ್ ಮಾಡಿ, ತಾನು ಇಂದು(ಶುಕ್ರವಾರ) ಮಧ್ಯಾಹ್ನ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಬೆಳಗಾವಿಯ ಸಾಹುಕಾರ್‌ಗೆ ಬಿಗ್ ಶಾಕ್ ನೀಡಿದೆ.

SIT ಗೆ ಹೊಸ ನಂಬರ್ ಕೊಟ್ಟು ಯಾಮಾರಿಸಿದ್ರಾ ಜಾರಕಿಹೊಳಿ...?

ಹೌದು ಸೋಶಿಯಲ್ ಮಿಡಿಯಾದಲ್ಲಿ ಮೂರನೇ ಬಾರಿ ವಿಡಿಯೋ ಮೂಲಕ ಕಾಣಿಸಿಕೊಂಡಿರುವ ಯುವತಿ ತಾನು ಅಜ್ಞಾತವಾಸ ಮುಗಿಸಿ ಪೊಲೀಸರೆದುರು ಹಾಜರಾಗುತ್ತೇನೆ. ರಮೇಶ್ ಜಾರಕಿಹೊಳಿ ವಿರುದ್ಧ ವಕೀಲ ಜಗದೀಶ್ ಮೂಲಕ ಇವತ್ತು ಮಧ್ಯಾಹ್ನ ಎರಡು ಗಂಟೆಗೆ ದೂರು ನೀಡುತ್ತೇನೆ. 24 ದಿನದಿಂದ ಜೀವ ಭಯದಿಂದ ಬದುಕುತ್ತಿದ್ದೆ.  ಆದರೀಗ ಎಲ್ಲೋ ಒಂದು ಕಡೆ ಧೈರ್ಯ ಬಂದಿದೆ ಎಂದಿದ್ದಾರೆ.

2ನೇ ವಿಡಿಯೋ ರಿಲೀಸ್ ಮಾಡಿ ಪೊಲೀಸರಿಗೆ ಪ್ರಶ್ನೆ; ಹೊಸ ವರಸೆ ತೆಗೆದೆ CD ಯುವತಿ!

ಸದ್ಯ ಜಾರಕಿಹೊಳಿ ವಿರುದ್ಧವೇ ತಿರುಗಿ ಬಿದ್ದಿರುವ ಸೀಡಿ ಯುವತಿ, ದೂರಿನ ಪ್ರತಿ ಬರೆಯುತ್ತಿರುವ ಫೋಟೋ ಕೂಡಾ ಲಭ್ಯವಾಗಿದೆ. ಅದೇನಿದ್ದರೂ ಸದ್ಯ ಕಳೆದ ಸುಮಾರು ಒಂದು ತಿಂಗಳಿನಿಂದ ನಡೆಯುತ್ತಿರುವ ಈ ಹೈಡ್ರಾಮಾ ಇಂದು ತಾರ್ಕಿಕ ಅಂತ್ಯ ಕಾಣುತ್ತಾ ಅಥವಾ ಸಿಡಿ ಗ್ಯಾಂಗ್ ಹಾಗೂ ಯುವತಿ ತಮ್ಮ ಅಜ್ಞಾತವಾಸ ಮುಂದುವರೆಸುತ್ತಾರಾ ಎಂಬುವುದಕ್ಕೆ ಇಂದು ಮಧ್ಯಾಹ್ನ ಉತ್ತರ ಸಿಗಲಿದೆ.  

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!