'ಮೀಸಲಾತಿ ಹೋರಾಟದ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುತ್ತೇನೆ. ಸಂವಿಧಾನದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ನಿರ್ಧರಿಸುವೆ. ವಾಲ್ಮೀಕಿ ಸಮಾಜ್ ನಾಯಕರ ಜೊತೆಗೂ ಚರ್ಚೆ ನಡೆಸುತ್ತೇನೆ' ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರು (ಫೆ. 18): 'ಮೀಸಲಾತಿ ಹೋರಾಟದ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುತ್ತೇನೆ. ಸಂವಿಧಾನದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ನಿರ್ಧರಿಸುವೆ. ವಾಲ್ಮೀಕಿ ಸಮಾಜ್ ನಾಯಕರ ಜೊತೆಗೂ ಚರ್ಚೆ ನಡೆಸುತ್ತೇನೆ' ಎಂದು ಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದ್ದು, ಸಿಎಂಗೆ ಸವಾಲಾಗಿದೆ. ಒಂದು ಸಮುದಾಯಕ್ಕೆ ಅಸ್ತು ಎಂದರೆ ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗಬೇಕಾದೀತು ಎಂಬ ಗೊಂದಲ ಸರ್ಕಾರಕ್ಕೆ. ಈ ಸವಾಲನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.