News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

Published : Jan 09, 2024, 10:58 PM IST

ನಾವು ಕೊಟ್ಟ ಅನ್ನಭಾಗ್ಯದ ಅಕ್ಕಿಯಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಈ ಮಾತಿಗೆ ಡಿಕೆಶಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
 

ಬೆಂಗಳೂರು (ಜ.9): ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ದಿನ ಸನಿಹವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಇದರ ಕ್ರೆಡಿಟ್‌ ವಾರ್‌ ಜೋರಾಗಿ ನಡೆಯುತ್ತಿದೆ. ಮಂಗಳವಾರ ರಾಜ್ಯ ಕಾಂಗ್ರೆಸ್‌ ತನ್ನ ಟ್ವಿಟರ್‌ನಲ್ಲಿ ರಾಮ ಮಂದಿರದ ಪೂಜೆಗೆ ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್‌ ಎಂದು ಹೇಳುವ ಮೂಲಕ ಕ್ರೆಡಿಟ್‌ ವಾರ್‌ ಶುರು ಮಾಡಿತು.

ಈ ಕುರಿತಾಗಿ ಮಾತನಾಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌, ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನೂ ಸಹ ಕರೆದಿಲ್ಲ. ನಾನು ಶಿವ ಭಕ್ತ. ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ.  ನಮ್ಮ ಅಕ್ಕಿ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ. ಅನ್ನಭಾಗ್ಯ ಯೋಜನೆ ಅಕ್ಕಿಯನ್ನೇ ಮಂತ್ರಾಕ್ಷತೆಗೆ ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿದೆ ಸಾಕ್ಷಿ, ದೇಶದ ಅತಿದೊಡ್ಡ ತೀರ್ಥಕ್ಷೇತ್ರ-ಪ್ರವಾಸಿ ಸ್ಥಳವಾಗುವ ಹಾದಿಯಲ್ಲಿ ಅಯೋಧ್ಯೆ!

ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ. ಮೊದಲು ರಾಮನೇ ಇಲ್ಲ ಎಂದು ಹೇಳಿದ್ರಿ, ಈಗ ವಿವಾದ ಮಾಡೋದಕ್ಕೆ ಹೊರಟಿದ್ದೀರಿ ಎಂದು ಕೇಂದ್ರ ಸಚಿವವ ಪ್ರಲ್ಹಾದ್‌ ಜೋಶಿ, ಪ್ರತಾಪ್‌ ಸಿಂಹ, ಈಶ್ವರಪ್ಪ ಕಾಂಗ್ರೆಸ್‌ ಹಾಗೂ ಡಿಕೆ ಶಿವಕುಮಾರ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more