ಕಾಂಗ್ರೆಸ್‌ನಲ್ಲಿ ಹೊಸ ಪವರ್ ಹೌಸ್: ದಲಿತ ಸಿಎಂ ರೇಸ್‌ನಲ್ಲಿ ಜಾರಕಿಹೊಳಿ ಮುಂಚೂಣಿ!

ಕಾಂಗ್ರೆಸ್‌ನಲ್ಲಿ ಹೊಸ ಪವರ್ ಹೌಸ್: ದಲಿತ ಸಿಎಂ ರೇಸ್‌ನಲ್ಲಿ ಜಾರಕಿಹೊಳಿ ಮುಂಚೂಣಿ!

Published : Oct 10, 2024, 08:42 PM IST

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಪವರ್‌ಹೌಸ್ ಸೃಷ್ಟಿಯಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ದಲಿತ ನಾಯಕರನ್ನು ತಮ್ಮ ಮನೆಗೆ (ಪವರ್‌ಹೌಸ್) ಕರೆಸಿಕೊಂಡು ಚರ್ಚೆ ಮಾಡಿದ್ದಾರೆ. 

ಕರ್ನಾಟಕ ಕಾಂಗ್ರೆಸ್‌ನಲ್ಲಿ ಇಷ್ಟು ದಿನ ಪವರ್ ಹೌಸ್‌ಗಳು ಎಂದು ಕಂಡುಬರುತ್ತಿದ್ದುದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಮನೆಗಳು ಮಾತ್ರ. ಆದರೆ, ಇದೀಗ ಕಾಂಗ್ರೆಸ್‌ನಲ್ಲಿ 3ನೇ ಪವರ್ ಹೌಸ್ ಆಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯೂ ಕಾಣಿಸಿಕೊಂಡಿದೆ. ಕಳೆದ 15 ದಿನಗಳಿಂದ ಸಚಿವ ಸತೀಶ್ ಹಾರಕಿಹೊಳಿ ಅವರು ದಲಿತ ನಾಯಕರ ಡಿನ್ನರ್ ಮೀಟಿಂಗ್ ಸೇರಿದಂತೆ ಹಲವು ನಾಯಕರನ್ನು ಕರೆಸಿ ಮೀಟಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತೂಗುಗತ್ತಿ ತೂಗುತ್ತಿದೆ. ಹೀಗಿರುವಾಗ ಬಹು ವರ್ಷಗಳಿಂದ ಕೆಳಿಬರುತ್ತಿದ್ದ ಕಾಂಗ್ರೆಸ್‌ನ ದಲಿತ ಸಿಎಂ ಕೂಗು ಇದೀಗ ಜೋರಾಗುತ್ತಿದೆ.

ಕಳೆದ 2013ರಲ್ಲಿಯೇ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಎಂದು ಬಿಂಬಿತವಾಗಿದ್ದ ಡಾ.ಜಿ. ಪರಮೇಶ್ವರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರಿಂದ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿದ್ದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದರು. ಇದೀಗ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಪಡೆದು ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಪೈಪೋಟಿಯ ನಡುವೆ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಈ ಮಂತ್ರಿಮಂಡಲದಲ್ಲಿ ಗೃಹ ಸಚಿವ ಪರಮೇಶ್ವರ್ ಗೃಹ ಸಚಿವರಾಗಿ ಪ್ರಭಾವಿ ಖಾತೆಯಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಇದೀಗ ದಲಿತ ಸಿಎಂ ಕೂಗು ಜೋರಾಗಿದೆ. ದಲಿತ ಸಿಎಂ ಎಂದಾಕ್ಷಣ ಸತೀಶ್ ಜಾರಕಿಹೊಳಿ ಮುನ್ನೆಲೆಗೆ ಬಂದಿದ್ದಾರೆ. ಹೀಗಾಗಿ, ಸತೀಶ್ ಜಾರಕಿಹೊಳಿ ಅವರು ರಾಜ್ಯದ ದಲಿತ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರನ್ನು ತಮ್ಮ ಮೆನೆಗೆ ಕರೆಸಿಕೊಂಡು ಡಿನ್ನರ್ ಮೀಟಿಂಗ್ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more