Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Mekedatu Padayatre: 27 ರಿಂದ ಮೇಕೆದಾಟು ಪಾದಯಾತ್ರೆ ಪುನಾರಂಭ

Published : Feb 25, 2022, 05:14 PM ISTUpdated : Feb 25, 2022, 06:00 PM IST

ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 25): ಕೋವಿಡ್‌ ಹಿನ್ನೆಲೆಯಲ್ಲಿ ಅರ್ಧದಲ್ಲೇ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಫೆ.27ರಂದು ರಾಮನಗರದಿಂದ 2ನೇ ಹಂತದ ಪಾದಯಾತ್ರೆ ಆರಂಭ​ವಾ​ಗ​ಲಿದೆ ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 

27 ರಂದು ಬೆಳಗ್ಗೆ 9 ಗಂಟೆಗೆ 2ನೇ ಹಂತದ ಪಾದಯಾತ್ರೆ ರಾಮನಗರದಿಂದಲೇ ಆರಂಭವಾಗಲಿದೆ. ಈ ವೇಳೆ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯದ ಅನೇಕ ಹಿರಿಯ ಕಾಂಗ್ರೆಸ್‌ ನಾಯಕರು ಭಾಗವಹಿಸಲಿದ್ದಾರೆ. ಈ ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಈಗ ಬಜೆಟ್‌ ಇರುವ ಕಾರಣ ಮೂರು ದಿನ ಮಾತ್ರ ಬೆಂಗಳೂರಿನಲ್ಲಿ ಮಾಡುತ್ತೇವೆ. ಒಟ್ಟು 5 ದಿನ ಪಾದಯಾತ್ರೆ ನಡೆಯಲಿದ್ದು, ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ.

ನಮ್ಮ ನೀರು-ನಮ್ಮ ಹಕ್ಕು ಘೋಷವಾಕ್ಯದೊಂದಿಗೆ ಕಾವೇರಿ ಮತ್ತು ಅರ್ಕಾವತಿ ನದಿಗಳು ಸೇರುವ ಸಂಗಮದಿಂದ ಜ.9ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಆರಂಭಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಈ ಪಾದಯಾತ್ರೆಯನ್ನು ಜ.13ರಂದು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more