ಬೀದಿಗಿಳಿದ ವೈದ್ಯರು; ಹಲ್ಲೆಕೋರರ ಬಂಧನಕ್ಕೆ ಆಗ್ರಹ

Nov 8, 2019, 12:36 PM IST

ಬೆಂಗಳೂರು (ನ.08): ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದಾರೆನ್ನಲಾದ ಹಲ್ಲೆಯನ್ನು ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. 

ಹಲ್ಲೆ ನಡೆಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಳಗ್ಗೆ 6 ರಿಂದ 24 ಗಂಟೆಗಳ ಕಾಲ ರಾಜ್ಯಾದ್ಯಂತ ವೈದ್ಯರು ಬೀದಿಗಿಳಿದಿದ್ದಾರೆ. 

ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದ್ದು, ಹೊರರೋಗಿ ವಿಭಾಗ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.