ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ:  ಎಚ್‌ಡಿಕೆ

ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ: ಎಚ್‌ಡಿಕೆ

Published : Aug 16, 2022, 04:31 PM ISTUpdated : Aug 16, 2022, 05:11 PM IST

ಸರ್ಕಾರದ ಬಗ್ಗೆ ಮಂತ್ರಿಗಳೇ ಹೇಳಿರೋದು ಸಾರ್ವಜನಿಕರ ಭಾವನೆಯೂ ಹೌದು. ಈ ಸರ್ಕಾರ ಸಮಯ ತಳ್ಳುತ್ತಿರುವ,  ಜಾಹಿರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಆ. 16): ಸರ್ಕಾರದ ಬಗ್ಗೆ ಸಚಿವ ಜೆಸಿ ಮಾಧುಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧುಸ್ವಾಮಿ ಒಬ್ಬ ಜವಾಬ್ದಾರಿಯುತ ಸಚಿವ, ಸರ್ಕಾರದ ನಡೆ ಬಗ್ಗೆ ಮಂತ್ರಿಗಳಿಂದಲೇ ಈ ಮಾತು ಬಂದಿದೆ. ಇದು ಸಾರ್ವಜನಿಕರಲ್ಲಿ ಇರುವ ಭಾವನೆಯೂ ಹೌದು ಎಂದು ಹೇಳಿದ್ದಾರೆ.

ಚೆನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಮಾಧುಸ್ವಾಮಿ ಅವರಲ್ಲಿಯೇ ವಿಶ್ವಾಸವಿಲ್ಲದೆ ಇರೋದನ್ನ ನಾನು ಗಮನಿಸಿದ್ದೇನೆ. ಬೇರೆ ಮಂತ್ರಿಗಳು ಕೊಟ್ಟ ಹೇಳಿಕೆಯನ್ನೂ ಗಮನಿಸಿದ್ದೇನೆ. ಇದು ಜಾಹೀರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

ಮಾಧುಸ್ವಾಮಿ ಸರ್ಕಾರದಲ್ಲಿ ಪ್ರಮುಖ ಸಚಿವ, ಅದರಲ್ಲೂ ಕಾನೂನು ಇಲಾಖೆಯನ್ನು ಅವರು ನಿಭಾಯಿಸುತ್ತಿದ್ದಾರೆ. ಸರ್ಕಾರದ ನಡೆ ಯಾವ ರೀತಿ ಇದೆ ಅನ್ನೋದು ಅಭಿಪ್ರಾಯ ಮಂತ್ರಿಗಳಿಂದಲೇ ಬಂದಿದೆ. ಈ ಸರ್ಕಾರ ಸಮಯ ತಳ್ಳುತ್ತಿರುವ ಸರ್ಕಾರ, ಜಾಹೀರಾತಿನ ಮೇಲೆ ನಡೆಯುತ್ತಿರೋ ಸರ್ಕಾರ ಎಂದು ಟೀಕಿಸಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more