ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ:  ಎಚ್‌ಡಿಕೆ

ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ: ಎಚ್‌ಡಿಕೆ

Published : Aug 16, 2022, 04:31 PM ISTUpdated : Aug 16, 2022, 05:11 PM IST

ಸರ್ಕಾರದ ಬಗ್ಗೆ ಮಂತ್ರಿಗಳೇ ಹೇಳಿರೋದು ಸಾರ್ವಜನಿಕರ ಭಾವನೆಯೂ ಹೌದು. ಈ ಸರ್ಕಾರ ಸಮಯ ತಳ್ಳುತ್ತಿರುವ,  ಜಾಹಿರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಆ. 16): ಸರ್ಕಾರದ ಬಗ್ಗೆ ಸಚಿವ ಜೆಸಿ ಮಾಧುಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧುಸ್ವಾಮಿ ಒಬ್ಬ ಜವಾಬ್ದಾರಿಯುತ ಸಚಿವ, ಸರ್ಕಾರದ ನಡೆ ಬಗ್ಗೆ ಮಂತ್ರಿಗಳಿಂದಲೇ ಈ ಮಾತು ಬಂದಿದೆ. ಇದು ಸಾರ್ವಜನಿಕರಲ್ಲಿ ಇರುವ ಭಾವನೆಯೂ ಹೌದು ಎಂದು ಹೇಳಿದ್ದಾರೆ.

ಚೆನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಮಾಧುಸ್ವಾಮಿ ಅವರಲ್ಲಿಯೇ ವಿಶ್ವಾಸವಿಲ್ಲದೆ ಇರೋದನ್ನ ನಾನು ಗಮನಿಸಿದ್ದೇನೆ. ಬೇರೆ ಮಂತ್ರಿಗಳು ಕೊಟ್ಟ ಹೇಳಿಕೆಯನ್ನೂ ಗಮನಿಸಿದ್ದೇನೆ. ಇದು ಜಾಹೀರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

ಮಾಧುಸ್ವಾಮಿ ಸರ್ಕಾರದಲ್ಲಿ ಪ್ರಮುಖ ಸಚಿವ, ಅದರಲ್ಲೂ ಕಾನೂನು ಇಲಾಖೆಯನ್ನು ಅವರು ನಿಭಾಯಿಸುತ್ತಿದ್ದಾರೆ. ಸರ್ಕಾರದ ನಡೆ ಯಾವ ರೀತಿ ಇದೆ ಅನ್ನೋದು ಅಭಿಪ್ರಾಯ ಮಂತ್ರಿಗಳಿಂದಲೇ ಬಂದಿದೆ. ಈ ಸರ್ಕಾರ ಸಮಯ ತಳ್ಳುತ್ತಿರುವ ಸರ್ಕಾರ, ಜಾಹೀರಾತಿನ ಮೇಲೆ ನಡೆಯುತ್ತಿರೋ ಸರ್ಕಾರ ಎಂದು ಟೀಕಿಸಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more