ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

Published : Jul 20, 2022, 07:56 PM IST

75 ನೇ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್‌ನಿಂದ ಅಮೃತ ಮಹೋತ್ಸವ ಯಾತ್ರೆಯನ್ನು ಕೈಗೊಳ್ಳಲಾಗಿದೆ. ರಾಜಭವನದಲ್ಲಿ ಈ ಯಾತ್ರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಬೆಂಗಳೂರು (ಜುಲೈ 20): ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏಷ್ಯಾನೆಟ್‌ ಸಮೂಹ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್‌ ಚಾಲನೆ ನೀಡಿದರು. ಈ ವೇಳೆ ಏಷ್ಯಾನೆಟ್‌ ಗ್ರೂಪ್‌ ಚೇರ್ಮನ್‌ ರಾಜೇಶ್‌ ಕಲ್ರಾ,  ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ, ಕರ್ನಾಟಕ-ಗೋವಾ ಎನ್‌ಸಿಸಿ ಗ್ರೂಪ್‌ ಕಮಾಂಡರ್‌ ಬಸಂತ್‌ ಸಿಂಗ್‌ ಸೇರಿದಂತೆ ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, "ದೇಶದ ಸದೃಢತೆ, ಏಕತೆಗೆ ಈ ಯಾತ್ರೆ ಬಹಳ ಪ್ರಮುಖ ಎಂದರು. ಕೇರಳದಿಂದ ಆರಂಭವಾದ ಈ ಯಾತ್ರೆಯ ಮಹತ್ವವನ್ನು ರಾಜೇಶ್‌ ಕಾಲ್ರಾ ಈ ವೇಳೆ ವಿವರಿಸಿದರು. ಕರ್ನಾಟಕ ಅದ್ಭುತಗಳಿರುವ ರಾಜ್ಯ. ಈ ಯಾತ್ರೆ ಅದ್ಬುತಗಳನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಲಿದೆ. ಈ ರಾಜ್ಯದ ಅದ್ಭುತಗಳೇ ಜಗತ್ತಿನ ಅದ್ಭುತಗಳಾಗುವ ಸಾಧ್ಯತೆ ಇದೆ. ನಮ್ಮ ರಾಜ್ಯದ ಅದ್ಭುತಗಳನ್ನು ನಾವು ಅರಿಯಬೇಕಿದೆ' ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಅದ್ದೂರಿ ಅಮೃತ ಮಹೋತ್ಸವಕ್ಕೆ ಸಜ್ಜು, 1 ಲಕ್ಷ ಜನ ಸೇರಿಸಿ ಆಚರಣೆ

ಕೇರಳದಿಂದ ಆರಂಭವಾಗಿರುವ ಅಮೃತ ಮಹೋತ್ಸವ ಯಾತ್ರೆಯ ಬಸ್‌, ದೇಶದ ಹಲವು ರಾಜ್ಯಗಳಲ್ಲಿ ಸಂಚಾರ ಮಾಡಲಿದೆ. ಎನ್‌ಸಿಸಿ ಕೆಡೆಟ್‌ಗಳು ಈ ಯಾತ್ರೆಯ ಭಾಗವಾಗಿರಲಿದ್ದಾರೆ. "ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿವೆ. ಅದೇ ರೀತಿ ಏಷ್ಯಾನೆಟ್‌ ಗ್ರೂಪ್‌ ಇದನ್ನು ಆಯೋಜನೆ ಮಾಡಿದೆ' ಎಂದು ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ ಹೇಳಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!