ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

Published : Jul 20, 2022, 07:56 PM IST

75 ನೇ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್‌ನಿಂದ ಅಮೃತ ಮಹೋತ್ಸವ ಯಾತ್ರೆಯನ್ನು ಕೈಗೊಳ್ಳಲಾಗಿದೆ. ರಾಜಭವನದಲ್ಲಿ ಈ ಯಾತ್ರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಬೆಂಗಳೂರು (ಜುಲೈ 20): ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏಷ್ಯಾನೆಟ್‌ ಸಮೂಹ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್‌ ಚಾಲನೆ ನೀಡಿದರು. ಈ ವೇಳೆ ಏಷ್ಯಾನೆಟ್‌ ಗ್ರೂಪ್‌ ಚೇರ್ಮನ್‌ ರಾಜೇಶ್‌ ಕಲ್ರಾ,  ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ, ಕರ್ನಾಟಕ-ಗೋವಾ ಎನ್‌ಸಿಸಿ ಗ್ರೂಪ್‌ ಕಮಾಂಡರ್‌ ಬಸಂತ್‌ ಸಿಂಗ್‌ ಸೇರಿದಂತೆ ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, "ದೇಶದ ಸದೃಢತೆ, ಏಕತೆಗೆ ಈ ಯಾತ್ರೆ ಬಹಳ ಪ್ರಮುಖ ಎಂದರು. ಕೇರಳದಿಂದ ಆರಂಭವಾದ ಈ ಯಾತ್ರೆಯ ಮಹತ್ವವನ್ನು ರಾಜೇಶ್‌ ಕಾಲ್ರಾ ಈ ವೇಳೆ ವಿವರಿಸಿದರು. ಕರ್ನಾಟಕ ಅದ್ಭುತಗಳಿರುವ ರಾಜ್ಯ. ಈ ಯಾತ್ರೆ ಅದ್ಬುತಗಳನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಲಿದೆ. ಈ ರಾಜ್ಯದ ಅದ್ಭುತಗಳೇ ಜಗತ್ತಿನ ಅದ್ಭುತಗಳಾಗುವ ಸಾಧ್ಯತೆ ಇದೆ. ನಮ್ಮ ರಾಜ್ಯದ ಅದ್ಭುತಗಳನ್ನು ನಾವು ಅರಿಯಬೇಕಿದೆ' ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಅದ್ದೂರಿ ಅಮೃತ ಮಹೋತ್ಸವಕ್ಕೆ ಸಜ್ಜು, 1 ಲಕ್ಷ ಜನ ಸೇರಿಸಿ ಆಚರಣೆ

ಕೇರಳದಿಂದ ಆರಂಭವಾಗಿರುವ ಅಮೃತ ಮಹೋತ್ಸವ ಯಾತ್ರೆಯ ಬಸ್‌, ದೇಶದ ಹಲವು ರಾಜ್ಯಗಳಲ್ಲಿ ಸಂಚಾರ ಮಾಡಲಿದೆ. ಎನ್‌ಸಿಸಿ ಕೆಡೆಟ್‌ಗಳು ಈ ಯಾತ್ರೆಯ ಭಾಗವಾಗಿರಲಿದ್ದಾರೆ. "ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿವೆ. ಅದೇ ರೀತಿ ಏಷ್ಯಾನೆಟ್‌ ಗ್ರೂಪ್‌ ಇದನ್ನು ಆಯೋಜನೆ ಮಾಡಿದೆ' ಎಂದು ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ ಹೇಳಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!