ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

Published : Jul 20, 2022, 07:56 PM IST

75 ನೇ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್‌ನಿಂದ ಅಮೃತ ಮಹೋತ್ಸವ ಯಾತ್ರೆಯನ್ನು ಕೈಗೊಳ್ಳಲಾಗಿದೆ. ರಾಜಭವನದಲ್ಲಿ ಈ ಯಾತ್ರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಬೆಂಗಳೂರು (ಜುಲೈ 20): ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏಷ್ಯಾನೆಟ್‌ ಸಮೂಹ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್‌ ಚಾಲನೆ ನೀಡಿದರು. ಈ ವೇಳೆ ಏಷ್ಯಾನೆಟ್‌ ಗ್ರೂಪ್‌ ಚೇರ್ಮನ್‌ ರಾಜೇಶ್‌ ಕಲ್ರಾ,  ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ, ಕರ್ನಾಟಕ-ಗೋವಾ ಎನ್‌ಸಿಸಿ ಗ್ರೂಪ್‌ ಕಮಾಂಡರ್‌ ಬಸಂತ್‌ ಸಿಂಗ್‌ ಸೇರಿದಂತೆ ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, "ದೇಶದ ಸದೃಢತೆ, ಏಕತೆಗೆ ಈ ಯಾತ್ರೆ ಬಹಳ ಪ್ರಮುಖ ಎಂದರು. ಕೇರಳದಿಂದ ಆರಂಭವಾದ ಈ ಯಾತ್ರೆಯ ಮಹತ್ವವನ್ನು ರಾಜೇಶ್‌ ಕಾಲ್ರಾ ಈ ವೇಳೆ ವಿವರಿಸಿದರು. ಕರ್ನಾಟಕ ಅದ್ಭುತಗಳಿರುವ ರಾಜ್ಯ. ಈ ಯಾತ್ರೆ ಅದ್ಬುತಗಳನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಲಿದೆ. ಈ ರಾಜ್ಯದ ಅದ್ಭುತಗಳೇ ಜಗತ್ತಿನ ಅದ್ಭುತಗಳಾಗುವ ಸಾಧ್ಯತೆ ಇದೆ. ನಮ್ಮ ರಾಜ್ಯದ ಅದ್ಭುತಗಳನ್ನು ನಾವು ಅರಿಯಬೇಕಿದೆ' ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಅದ್ದೂರಿ ಅಮೃತ ಮಹೋತ್ಸವಕ್ಕೆ ಸಜ್ಜು, 1 ಲಕ್ಷ ಜನ ಸೇರಿಸಿ ಆಚರಣೆ

ಕೇರಳದಿಂದ ಆರಂಭವಾಗಿರುವ ಅಮೃತ ಮಹೋತ್ಸವ ಯಾತ್ರೆಯ ಬಸ್‌, ದೇಶದ ಹಲವು ರಾಜ್ಯಗಳಲ್ಲಿ ಸಂಚಾರ ಮಾಡಲಿದೆ. ಎನ್‌ಸಿಸಿ ಕೆಡೆಟ್‌ಗಳು ಈ ಯಾತ್ರೆಯ ಭಾಗವಾಗಿರಲಿದ್ದಾರೆ. "ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿವೆ. ಅದೇ ರೀತಿ ಏಷ್ಯಾನೆಟ್‌ ಗ್ರೂಪ್‌ ಇದನ್ನು ಆಯೋಜನೆ ಮಾಡಿದೆ' ಎಂದು ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ ಹೇಳಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!