ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

Published : Feb 22, 2022, 11:45 AM IST

 ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 
 

 ಬೆಂಗಳೂರು (ಫೆ. 22): ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ಕುರಿ, ಮೇಕೆಗಳು ಮೃತಪಟ್ಟಾಗ ಪ್ರಸ್ತುತ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರ ಮೊತ್ತವು ಸಾಕಾಗುವುದಿಲ್ಲ ಎಂಬುದು ಸದಸ್ಯರ ಒತ್ತಾಯವಾಗಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಶೆಂಪೂರ, ಸದ್ಯಕ್ಕೆ ಮರಿ ಕುರಿ, ಮೇಕೆಗಳು ಸಾವನ್ನಪ್ಪಿದರೆ ಎರಡೂವರೆ ಸಾವಿರ ರು., ದೊಡ್ಡ ಕುರಿ, ಮೇಕೆ ಸಾವನ್ನಪ್ಪಿದರೆ ಐದು ಸಾವಿರ ರು. ಪರಿಹಾರವನ್ನು ಸಾಕಾಣಿಕೆದಾರರಿಗೆ ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಪರಿಹಾರ ಮೊತ್ತವನ್ನು 10 ಸಾವಿರ ರು.ಗೆ ಹೆಚ್ಚಿಸಬೇಕು. ಅಲ್ಲದೇ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತವನ್ನು 75 ಸಾವಿರ ರು.ಗೆ ಹೆಚ್ಚಿಸಬೇಕು. ಗಡಿಭಾಗದಲ್ಲಿನ ತೆಲಂಗಾಣದಲ್ಲಿ ಕುರಿ, ಮೇಕೆ ಸಾಕಾಣಿಗೆ ಶೇ.90ರಷ್ಟುಸಬ್ಸಿಡಿ ನಿಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more