ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

Published : Feb 22, 2022, 11:45 AM IST

 ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 
 

 ಬೆಂಗಳೂರು (ಫೆ. 22): ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ಕುರಿ, ಮೇಕೆಗಳು ಮೃತಪಟ್ಟಾಗ ಪ್ರಸ್ತುತ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರ ಮೊತ್ತವು ಸಾಕಾಗುವುದಿಲ್ಲ ಎಂಬುದು ಸದಸ್ಯರ ಒತ್ತಾಯವಾಗಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಶೆಂಪೂರ, ಸದ್ಯಕ್ಕೆ ಮರಿ ಕುರಿ, ಮೇಕೆಗಳು ಸಾವನ್ನಪ್ಪಿದರೆ ಎರಡೂವರೆ ಸಾವಿರ ರು., ದೊಡ್ಡ ಕುರಿ, ಮೇಕೆ ಸಾವನ್ನಪ್ಪಿದರೆ ಐದು ಸಾವಿರ ರು. ಪರಿಹಾರವನ್ನು ಸಾಕಾಣಿಕೆದಾರರಿಗೆ ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಪರಿಹಾರ ಮೊತ್ತವನ್ನು 10 ಸಾವಿರ ರು.ಗೆ ಹೆಚ್ಚಿಸಬೇಕು. ಅಲ್ಲದೇ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತವನ್ನು 75 ಸಾವಿರ ರು.ಗೆ ಹೆಚ್ಚಿಸಬೇಕು. ಗಡಿಭಾಗದಲ್ಲಿನ ತೆಲಂಗಾಣದಲ್ಲಿ ಕುರಿ, ಮೇಕೆ ಸಾಕಾಣಿಗೆ ಶೇ.90ರಷ್ಟುಸಬ್ಸಿಡಿ ನಿಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more