ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

Published : Feb 22, 2022, 11:45 AM IST

 ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 
 

 ಬೆಂಗಳೂರು (ಫೆ. 22): ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ಕುರಿ, ಮೇಕೆಗಳು ಮೃತಪಟ್ಟಾಗ ಪ್ರಸ್ತುತ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರ ಮೊತ್ತವು ಸಾಕಾಗುವುದಿಲ್ಲ ಎಂಬುದು ಸದಸ್ಯರ ಒತ್ತಾಯವಾಗಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಶೆಂಪೂರ, ಸದ್ಯಕ್ಕೆ ಮರಿ ಕುರಿ, ಮೇಕೆಗಳು ಸಾವನ್ನಪ್ಪಿದರೆ ಎರಡೂವರೆ ಸಾವಿರ ರು., ದೊಡ್ಡ ಕುರಿ, ಮೇಕೆ ಸಾವನ್ನಪ್ಪಿದರೆ ಐದು ಸಾವಿರ ರು. ಪರಿಹಾರವನ್ನು ಸಾಕಾಣಿಕೆದಾರರಿಗೆ ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಪರಿಹಾರ ಮೊತ್ತವನ್ನು 10 ಸಾವಿರ ರು.ಗೆ ಹೆಚ್ಚಿಸಬೇಕು. ಅಲ್ಲದೇ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತವನ್ನು 75 ಸಾವಿರ ರು.ಗೆ ಹೆಚ್ಚಿಸಬೇಕು. ಗಡಿಭಾಗದಲ್ಲಿನ ತೆಲಂಗಾಣದಲ್ಲಿ ಕುರಿ, ಮೇಕೆ ಸಾಕಾಣಿಗೆ ಶೇ.90ರಷ್ಟುಸಬ್ಸಿಡಿ ನಿಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more