ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

ಅಸಹಜವಾಗಿ ಮೃತಪಡುವ ಕುರಿಗಳ ಪರಿಹಾರ ಮೊತ್ತ ಹೆಚ್ಚಳ: ಪ್ರಭು ಚವ್ಹಾಣ್

Published : Feb 22, 2022, 11:45 AM IST

 ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 
 

 ಬೆಂಗಳೂರು (ಫೆ. 22): ಅನ್ಯ ಕಾರಣಗಳಿಂದಾಗಿ ಕುರಿ, ಮೇಕೆಗಳು ಸಾವನ್ನಪಿದಾಗ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ ಪ್ರಶ್ನೆಗೆ ಉತ್ತರಿಸಿದ ಅವರು, ಕುರಿ, ಮೇಕೆಗಳು ಮೃತಪಟ್ಟಾಗ ಪ್ರಸ್ತುತ ಸಾಕಾಣಿಕೆದಾರರಿಗೆ ನೀಡುತ್ತಿರುವ ಪರಿಹಾರ ಮೊತ್ತವು ಸಾಕಾಗುವುದಿಲ್ಲ ಎಂಬುದು ಸದಸ್ಯರ ಒತ್ತಾಯವಾಗಿದೆ. ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಶೆಂಪೂರ, ಸದ್ಯಕ್ಕೆ ಮರಿ ಕುರಿ, ಮೇಕೆಗಳು ಸಾವನ್ನಪ್ಪಿದರೆ ಎರಡೂವರೆ ಸಾವಿರ ರು., ದೊಡ್ಡ ಕುರಿ, ಮೇಕೆ ಸಾವನ್ನಪ್ಪಿದರೆ ಐದು ಸಾವಿರ ರು. ಪರಿಹಾರವನ್ನು ಸಾಕಾಣಿಕೆದಾರರಿಗೆ ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ. ಪರಿಹಾರ ಮೊತ್ತವನ್ನು 10 ಸಾವಿರ ರು.ಗೆ ಹೆಚ್ಚಿಸಬೇಕು. ಅಲ್ಲದೇ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಸಾಕಾಣಿಕೆಗೆ ಒದಗಿಸುತ್ತಿರುವ ಸಹಾಯಧನದ ಮೊತ್ತವನ್ನು 75 ಸಾವಿರ ರು.ಗೆ ಹೆಚ್ಚಿಸಬೇಕು. ಗಡಿಭಾಗದಲ್ಲಿನ ತೆಲಂಗಾಣದಲ್ಲಿ ಕುರಿ, ಮೇಕೆ ಸಾಕಾಣಿಗೆ ಶೇ.90ರಷ್ಟುಸಬ್ಸಿಡಿ ನಿಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಗಮನಹರಿಸಬೇಕು ಎಂದರು.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more