Jul 13, 2020, 5:21 PM IST
ಬೆಂಗಳೂರು (ಜು. 13): ಕೊರೊನಾ ತಡೆಗೆ ಲಾಕ್ಡೌನ್ ಪರಿಹಾರ ಅಲ್ಲ. ಕೊರೊನಾವನ್ನು ಪೋಸ್ಟ್ಪೋನ್ ಮಾಡಬಹುದೇ ವಿನಃ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಸುಮ್ಮನೆ ಲಾಕ್ಡೌನ್ ಮಾಡಿ ಆರ್ಥಿಕ ನಷ್ಟ ಮಾಡಿಕೊಳ್ಳುವುದು ತರವಲ್ಲ ಎಂದು ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಲಾಕ್ಡೌನ್ ಮಾಡುವುದು ನಿಮ್ಮ ವಿವೇಚನೆಗೆ ಬಿಟ್ಟಿದ್ದು ಎಂದು ಡಿಸಿಗಳಿಗೆ ಸಲಹೆ ನೀಡಿದ್ದಾರೆ. ಈ ಬಾರಿ ಲಾಕ್ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್; ಮನೆಯಲ್ಲಿಯೇ ಆಚರಿಸಲು ಸಿಎಂ ಸಲಹೆ