ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

Published : Jul 06, 2023, 10:13 PM ISTUpdated : Jul 06, 2023, 10:14 PM IST

ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌ ನಡೆಯಲಿದೆ.

ಬೆಂಗಳೂರು (ಜು.06): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಜುಲೈ 8ರಂದು ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೆಗಾ ಲೋಕ್‌ ಅದಾಲತ್‌ ಆಯೋಜನೆ ಮಾಡಲಾಗುತ್ತಿದೆ. ಸುಮಾರು 20 ಲಕ್ಷಕ್ಕೂ ಅಧಿಕ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಜಿ. ನರೇಂದರ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕ ಅದಾಲತ್‌ ಆಯೋಜಿಸಿ ಮಿಡಿಯೇಷನ್ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು. ವಿವಿಧ ರೀತಿಯ ಕೇಸ್ ಗಳ ಇತ್ಯರ್ಥಕ್ಕೆ ಲೋಕ ಅದಾಲತ್‌ ಸೂಕ್ತ ವೇದಿಕೆಯಾಗಲಿದೆ. ಅಪಘಾತ, ಚೆಕ್ ಬೌನ್ಸ್, ಮನಿ ರಿಕವರಿ ಕೇಸ್ ಸೇರಿದ ವಿವಿಧ ಪ್ರಕರಣಗಳ ಇತ್ಯರ್ಥ ಮಾಡಲಾಗುತ್ತದೆ. ಇನ್ನು ಪ್ರಕರಣದ ಕಕ್ಷಿದಾರರು ಇದರ ಲಾಭ ಪಡೆದುಕೊಳ್ಳಬಹುದು.

ಇನ್ನು ಜುಲೈ 8ರ ಶನಿವಾರ ಬೆಳಗ್ಗೆ 10:30 ಕ್ಕೆ ರಾಜ್ಯಾದ್ಯಂತ ಲೋಕ್ ಆದಾಲತ್ ಆರಂಭವಾಗಲಿದೆ. ಈ ವೇಳೆ ತುಂಬಾ ವರ್ಷಗಳಿಂದ ಉಳಿದಿರುವ ಪ್ರಕರಣಗಳ ಸೆಟ್ಲ್ಮೆಂಟ್ ಮಾಡಲಿದೆ. ಫ್ಯಾಮಿಲಿ ಕೇಸ್, ಪ್ರಾಪರ್ಟಿ ಕೇಸ್, ಟ್ರಾಫಿಕ್ ಕೇಸ್, ಚೆಕ್ ಬೌನ್ಸ್ ಕೇಸ್ ಸೇರಿ ರಾಜ್ಯಾದ್ಯಂತ ಸುಮಾರು 20 ಲಕ್ಷ ಪ್ರಕರಣಗಳ ಇತ್ಯರ್ಥಗೊಳ್ಳುವ ಸಾಧ್ಯತೆಯಿದೆ ಎಂದು ನ್ಯಾಯಮೂರ್ತಿ ಜಿ. ನರೇಂದರ್‌ ಹೇಳಿದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more