ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

Published : Jul 06, 2023, 10:13 PM ISTUpdated : Jul 06, 2023, 10:14 PM IST

ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌ ನಡೆಯಲಿದೆ.

ಬೆಂಗಳೂರು (ಜು.06): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಜುಲೈ 8ರಂದು ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೆಗಾ ಲೋಕ್‌ ಅದಾಲತ್‌ ಆಯೋಜನೆ ಮಾಡಲಾಗುತ್ತಿದೆ. ಸುಮಾರು 20 ಲಕ್ಷಕ್ಕೂ ಅಧಿಕ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಜಿ. ನರೇಂದರ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕ ಅದಾಲತ್‌ ಆಯೋಜಿಸಿ ಮಿಡಿಯೇಷನ್ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು. ವಿವಿಧ ರೀತಿಯ ಕೇಸ್ ಗಳ ಇತ್ಯರ್ಥಕ್ಕೆ ಲೋಕ ಅದಾಲತ್‌ ಸೂಕ್ತ ವೇದಿಕೆಯಾಗಲಿದೆ. ಅಪಘಾತ, ಚೆಕ್ ಬೌನ್ಸ್, ಮನಿ ರಿಕವರಿ ಕೇಸ್ ಸೇರಿದ ವಿವಿಧ ಪ್ರಕರಣಗಳ ಇತ್ಯರ್ಥ ಮಾಡಲಾಗುತ್ತದೆ. ಇನ್ನು ಪ್ರಕರಣದ ಕಕ್ಷಿದಾರರು ಇದರ ಲಾಭ ಪಡೆದುಕೊಳ್ಳಬಹುದು.

ಇನ್ನು ಜುಲೈ 8ರ ಶನಿವಾರ ಬೆಳಗ್ಗೆ 10:30 ಕ್ಕೆ ರಾಜ್ಯಾದ್ಯಂತ ಲೋಕ್ ಆದಾಲತ್ ಆರಂಭವಾಗಲಿದೆ. ಈ ವೇಳೆ ತುಂಬಾ ವರ್ಷಗಳಿಂದ ಉಳಿದಿರುವ ಪ್ರಕರಣಗಳ ಸೆಟ್ಲ್ಮೆಂಟ್ ಮಾಡಲಿದೆ. ಫ್ಯಾಮಿಲಿ ಕೇಸ್, ಪ್ರಾಪರ್ಟಿ ಕೇಸ್, ಟ್ರಾಫಿಕ್ ಕೇಸ್, ಚೆಕ್ ಬೌನ್ಸ್ ಕೇಸ್ ಸೇರಿ ರಾಜ್ಯಾದ್ಯಂತ ಸುಮಾರು 20 ಲಕ್ಷ ಪ್ರಕರಣಗಳ ಇತ್ಯರ್ಥಗೊಳ್ಳುವ ಸಾಧ್ಯತೆಯಿದೆ ಎಂದು ನ್ಯಾಯಮೂರ್ತಿ ಜಿ. ನರೇಂದರ್‌ ಹೇಳಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more