ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌: 20 ಲಕ್ಷ ಕೇಸ್‌ ಇತ್ಯರ್ಥ ಗುರಿ

Published : Jul 06, 2023, 10:13 PM ISTUpdated : Jul 06, 2023, 10:14 PM IST

ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 8ರಂದು ಮೆಗಾ ಲೋಕ್‌ ಅದಾಲತ್‌ ನಡೆಯಲಿದೆ.

ಬೆಂಗಳೂರು (ಜು.06): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಜುಲೈ 8ರಂದು ರಾಜ್ಯದ ಹೈಕೋರ್ಟ್, ಎಲ್ಲಾ ಜಿಲ್ಲಾ ನ್ಯಾಯಾಲಯಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಮೆಗಾ ಲೋಕ್‌ ಅದಾಲತ್‌ ಆಯೋಜನೆ ಮಾಡಲಾಗುತ್ತಿದೆ. ಸುಮಾರು 20 ಲಕ್ಷಕ್ಕೂ ಅಧಿಕ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಜಿ. ನರೇಂದರ್‌ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕ ಅದಾಲತ್‌ ಆಯೋಜಿಸಿ ಮಿಡಿಯೇಷನ್ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು. ವಿವಿಧ ರೀತಿಯ ಕೇಸ್ ಗಳ ಇತ್ಯರ್ಥಕ್ಕೆ ಲೋಕ ಅದಾಲತ್‌ ಸೂಕ್ತ ವೇದಿಕೆಯಾಗಲಿದೆ. ಅಪಘಾತ, ಚೆಕ್ ಬೌನ್ಸ್, ಮನಿ ರಿಕವರಿ ಕೇಸ್ ಸೇರಿದ ವಿವಿಧ ಪ್ರಕರಣಗಳ ಇತ್ಯರ್ಥ ಮಾಡಲಾಗುತ್ತದೆ. ಇನ್ನು ಪ್ರಕರಣದ ಕಕ್ಷಿದಾರರು ಇದರ ಲಾಭ ಪಡೆದುಕೊಳ್ಳಬಹುದು.

ಇನ್ನು ಜುಲೈ 8ರ ಶನಿವಾರ ಬೆಳಗ್ಗೆ 10:30 ಕ್ಕೆ ರಾಜ್ಯಾದ್ಯಂತ ಲೋಕ್ ಆದಾಲತ್ ಆರಂಭವಾಗಲಿದೆ. ಈ ವೇಳೆ ತುಂಬಾ ವರ್ಷಗಳಿಂದ ಉಳಿದಿರುವ ಪ್ರಕರಣಗಳ ಸೆಟ್ಲ್ಮೆಂಟ್ ಮಾಡಲಿದೆ. ಫ್ಯಾಮಿಲಿ ಕೇಸ್, ಪ್ರಾಪರ್ಟಿ ಕೇಸ್, ಟ್ರಾಫಿಕ್ ಕೇಸ್, ಚೆಕ್ ಬೌನ್ಸ್ ಕೇಸ್ ಸೇರಿ ರಾಜ್ಯಾದ್ಯಂತ ಸುಮಾರು 20 ಲಕ್ಷ ಪ್ರಕರಣಗಳ ಇತ್ಯರ್ಥಗೊಳ್ಳುವ ಸಾಧ್ಯತೆಯಿದೆ ಎಂದು ನ್ಯಾಯಮೂರ್ತಿ ಜಿ. ನರೇಂದರ್‌ ಹೇಳಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more