Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Suvarna News   | Asianet News
Published : Dec 26, 2021, 12:34 PM ISTUpdated : Dec 26, 2021, 12:48 PM IST

ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ.

ಬೆಂಗಳೂರು (ಡಿ. 25): ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, 2023ರ ಚುನಾವಣೆವರೆಗೂ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಎಂದಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಪೋಲ ಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟು ಹಾಕಲು ಮುಖ್ಯಮಂತ್ರಿ ಬದಲಾವಣೆ ಸುದ್ದಿ ಹರಡಿಸುತ್ತಿದ್ದಾರೆ. ಕಾಂಗ್ರೆಸ್‌ನವರೇ ಈ ಸುದ್ದಿ ಹುಟ್ಟು ಹಾಕಿರಬಹುದು ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) 2023ರ ಚುನಾವಣೆ ವರೆಗೂ ಬೊಮ್ಮಾಯಿ ಅವರೇ ಸಿಎಂ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಒಟ್ಟಾಗಿ ಎದುರಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ. ಖುದ್ದು ಗೃಹ ಸಚಿವ ಅಮಿತ್‌ ಶಾ ಅವರೇ ಬಹಿರಂಗ ವೇದಿಕೆಯಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more