Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Suvarna News   | Asianet News
Published : Dec 26, 2021, 12:34 PM ISTUpdated : Dec 26, 2021, 12:48 PM IST

ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ.

ಬೆಂಗಳೂರು (ಡಿ. 25): ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, 2023ರ ಚುನಾವಣೆವರೆಗೂ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಎಂದಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಪೋಲ ಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟು ಹಾಕಲು ಮುಖ್ಯಮಂತ್ರಿ ಬದಲಾವಣೆ ಸುದ್ದಿ ಹರಡಿಸುತ್ತಿದ್ದಾರೆ. ಕಾಂಗ್ರೆಸ್‌ನವರೇ ಈ ಸುದ್ದಿ ಹುಟ್ಟು ಹಾಕಿರಬಹುದು ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) 2023ರ ಚುನಾವಣೆ ವರೆಗೂ ಬೊಮ್ಮಾಯಿ ಅವರೇ ಸಿಎಂ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಒಟ್ಟಾಗಿ ಎದುರಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ. ಖುದ್ದು ಗೃಹ ಸಚಿವ ಅಮಿತ್‌ ಶಾ ಅವರೇ ಬಹಿರಂಗ ವೇದಿಕೆಯಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more