ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

Published : Dec 03, 2024, 03:55 PM IST

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್ ವಿರುದ್ಧದ ಹೋರಾಟದಲ್ಲಿ ಪಕ್ಷದ ನಾಯಕರನ್ನು ಕಡೆಗಣಿಸಿದ್ದಕ್ಕೆ ಹೈಕಮಾಂಡ್ ನೋಟಿಸ್ ನೀಡಿದೆ. ಯತ್ನಾಳ್‌ರ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ.

ಕರ್ನಾಟಕ ರಾಜ್ಯದ ಬಿಜೆಪಿ ನಾಯಕತ್ವ ವಿಚಾರದಲ್ಲಿ ರಗಳೆ ಮುಗಿಯುತ್ತಿಲ್ಲ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೂ, ಪಕ್ಷಕ್ಕಾಗಿ ದುಡಿಯುತ್ತಾ ಜೀವನ ಸವೆಸಿದ ಹಿರಿಯ ನಾಯಕರನ್ನು ಬಿಟ್ಟು ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಪಡೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಟ್ಟಾಗಿದ್ದಾರೆ. 

ರಾಜ್ಯದಲ್ಲಿ ಹಿಂದೂ ಹುಲಿ ಎಂದು ಖ್ಯಾತಿ ಆಗಿದ್ದರೂ ಪಕ್ಷದಿಂದ ಯಾವುದೇ ಒಂದು ಜವಾಬ್ದಾರಿಯುತ ಹುದ್ದೆಯನ್ನೂ ನೀಡಲಿಲ್ಲ. ಕೇಂದ್ರ ಸರ್ಕಾರದಲ್ಲಿಯೇ ಸಚಿವರಾಗಿ ಆಡಳಿತ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಚಿವ ಸ್ಥಾನ ನೀಡದೇ ಕೈಬಿಡಲಾಗಿತ್ತು. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ವಿಪಕ್ಷ ಸ್ಥಾನವಾಗಿರುವ ಬಿಜೆಪಿ ತಮ್ಮನ್ನು ವಿಪಕ್ಷ ನಾಯಕರನ್ನಾಗಲೀ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಲೀ ಮಾಡಲಿದೆ ಎಂದು ಯತ್ನಾಳ್ ನಿರೀಕ್ಷೆ ಇಟ್ಟುಕೊಂಡಿದ್ದರು. ಯಾವಾಗ ಎರಡೂ ನಿರೀಕ್ಷೆಗಳು ಸುಳ್ಳಾದವೋ ಆಗ ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ತೊಡೆ ತಟ್ಟಿದ್ದಾರೆ. 

ಹೀಗಾಗಿ ನೇರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಅನೇಕ ಬಿಜೆಪಿ ನಾಯಕರ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇದರ ಬೆನ್ನಲ್ಲಿಯೇ ವಕ್ಫ್ ಕುರಿತ ಹೋರಾಟದ ವಿಚಾರದಲ್ಲಿ ಬಿಜೆಪಿ ರಾಜ್ಯ ನಾಯಕರನ್ನು ಹೊರಗಿಟ್ಟು ತಮ್ಮದೇ ನಾಯಕರ ತಂಡ ಸೃಷ್ಟಿಸಿಕೊಂಡು ಯತ್ನಾಳ್ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಆದರೆ, ಇದೊಂದು ಪಕ್ಷ ವಿರೋಧಿ ಕಾರ್ಯಕ್ರಮವೆಂದು ಹಾಗೂ ರಾಜ್ಯಾಧ್ಯಕ್ಷರಿಗೆ ನಾಲಿಗೆ ಹರಿಬಿಟ್ಟು ಪಕ್ಷದ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹೈಕಮಾಂಡ್‌ನಿಂದ ನೋಟೀಸ್ ಜಾರಿ ಮಾಡಲಾಗಿದೆ. ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತಿದ್ದು, ಯಾವ ಕ್ರಮ ಕೈಗೊಳ್ಳಲಿದೆ ಎಂಬ ತೀರ್ಮಾನ ಕುತೂಹಲ ಕೆರಳಿಸಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!