ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

Published : Dec 03, 2024, 03:55 PM IST

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್ ವಿರುದ್ಧದ ಹೋರಾಟದಲ್ಲಿ ಪಕ್ಷದ ನಾಯಕರನ್ನು ಕಡೆಗಣಿಸಿದ್ದಕ್ಕೆ ಹೈಕಮಾಂಡ್ ನೋಟಿಸ್ ನೀಡಿದೆ. ಯತ್ನಾಳ್‌ರ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ.

ಕರ್ನಾಟಕ ರಾಜ್ಯದ ಬಿಜೆಪಿ ನಾಯಕತ್ವ ವಿಚಾರದಲ್ಲಿ ರಗಳೆ ಮುಗಿಯುತ್ತಿಲ್ಲ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೂ, ಪಕ್ಷಕ್ಕಾಗಿ ದುಡಿಯುತ್ತಾ ಜೀವನ ಸವೆಸಿದ ಹಿರಿಯ ನಾಯಕರನ್ನು ಬಿಟ್ಟು ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಪಡೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಟ್ಟಾಗಿದ್ದಾರೆ. 

ರಾಜ್ಯದಲ್ಲಿ ಹಿಂದೂ ಹುಲಿ ಎಂದು ಖ್ಯಾತಿ ಆಗಿದ್ದರೂ ಪಕ್ಷದಿಂದ ಯಾವುದೇ ಒಂದು ಜವಾಬ್ದಾರಿಯುತ ಹುದ್ದೆಯನ್ನೂ ನೀಡಲಿಲ್ಲ. ಕೇಂದ್ರ ಸರ್ಕಾರದಲ್ಲಿಯೇ ಸಚಿವರಾಗಿ ಆಡಳಿತ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಚಿವ ಸ್ಥಾನ ನೀಡದೇ ಕೈಬಿಡಲಾಗಿತ್ತು. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ವಿಪಕ್ಷ ಸ್ಥಾನವಾಗಿರುವ ಬಿಜೆಪಿ ತಮ್ಮನ್ನು ವಿಪಕ್ಷ ನಾಯಕರನ್ನಾಗಲೀ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಲೀ ಮಾಡಲಿದೆ ಎಂದು ಯತ್ನಾಳ್ ನಿರೀಕ್ಷೆ ಇಟ್ಟುಕೊಂಡಿದ್ದರು. ಯಾವಾಗ ಎರಡೂ ನಿರೀಕ್ಷೆಗಳು ಸುಳ್ಳಾದವೋ ಆಗ ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ತೊಡೆ ತಟ್ಟಿದ್ದಾರೆ. 

ಹೀಗಾಗಿ ನೇರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಅನೇಕ ಬಿಜೆಪಿ ನಾಯಕರ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇದರ ಬೆನ್ನಲ್ಲಿಯೇ ವಕ್ಫ್ ಕುರಿತ ಹೋರಾಟದ ವಿಚಾರದಲ್ಲಿ ಬಿಜೆಪಿ ರಾಜ್ಯ ನಾಯಕರನ್ನು ಹೊರಗಿಟ್ಟು ತಮ್ಮದೇ ನಾಯಕರ ತಂಡ ಸೃಷ್ಟಿಸಿಕೊಂಡು ಯತ್ನಾಳ್ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಆದರೆ, ಇದೊಂದು ಪಕ್ಷ ವಿರೋಧಿ ಕಾರ್ಯಕ್ರಮವೆಂದು ಹಾಗೂ ರಾಜ್ಯಾಧ್ಯಕ್ಷರಿಗೆ ನಾಲಿಗೆ ಹರಿಬಿಟ್ಟು ಪಕ್ಷದ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹೈಕಮಾಂಡ್‌ನಿಂದ ನೋಟೀಸ್ ಜಾರಿ ಮಾಡಲಾಗಿದೆ. ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತಿದ್ದು, ಯಾವ ಕ್ರಮ ಕೈಗೊಳ್ಳಲಿದೆ ಎಂಬ ತೀರ್ಮಾನ ಕುತೂಹಲ ಕೆರಳಿಸಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ