ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

ರೆಬೆಲ್ ಯತ್ನಾಳ್ ಜೊತೆಗೆ ರಾಜೀ ಸಂಧಾನಕ್ಕೆ ಮುಂದಾಯ್ತಾ ಬಿಜೆಪಿ ಹೈಕಮಾಂಡ್?

Published : Dec 03, 2024, 03:55 PM IST

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್ ವಿರುದ್ಧದ ಹೋರಾಟದಲ್ಲಿ ಪಕ್ಷದ ನಾಯಕರನ್ನು ಕಡೆಗಣಿಸಿದ್ದಕ್ಕೆ ಹೈಕಮಾಂಡ್ ನೋಟಿಸ್ ನೀಡಿದೆ. ಯತ್ನಾಳ್‌ರ ವಿರುದ್ಧ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ.

ಕರ್ನಾಟಕ ರಾಜ್ಯದ ಬಿಜೆಪಿ ನಾಯಕತ್ವ ವಿಚಾರದಲ್ಲಿ ರಗಳೆ ಮುಗಿಯುತ್ತಿಲ್ಲ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೂ, ಪಕ್ಷಕ್ಕಾಗಿ ದುಡಿಯುತ್ತಾ ಜೀವನ ಸವೆಸಿದ ಹಿರಿಯ ನಾಯಕರನ್ನು ಬಿಟ್ಟು ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಪಡೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಟ್ಟಾಗಿದ್ದಾರೆ. 

ರಾಜ್ಯದಲ್ಲಿ ಹಿಂದೂ ಹುಲಿ ಎಂದು ಖ್ಯಾತಿ ಆಗಿದ್ದರೂ ಪಕ್ಷದಿಂದ ಯಾವುದೇ ಒಂದು ಜವಾಬ್ದಾರಿಯುತ ಹುದ್ದೆಯನ್ನೂ ನೀಡಲಿಲ್ಲ. ಕೇಂದ್ರ ಸರ್ಕಾರದಲ್ಲಿಯೇ ಸಚಿವರಾಗಿ ಆಡಳಿತ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಚಿವ ಸ್ಥಾನ ನೀಡದೇ ಕೈಬಿಡಲಾಗಿತ್ತು. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ವಿಪಕ್ಷ ಸ್ಥಾನವಾಗಿರುವ ಬಿಜೆಪಿ ತಮ್ಮನ್ನು ವಿಪಕ್ಷ ನಾಯಕರನ್ನಾಗಲೀ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಲೀ ಮಾಡಲಿದೆ ಎಂದು ಯತ್ನಾಳ್ ನಿರೀಕ್ಷೆ ಇಟ್ಟುಕೊಂಡಿದ್ದರು. ಯಾವಾಗ ಎರಡೂ ನಿರೀಕ್ಷೆಗಳು ಸುಳ್ಳಾದವೋ ಆಗ ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ತೊಡೆ ತಟ್ಟಿದ್ದಾರೆ. 

ಹೀಗಾಗಿ ನೇರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಅನೇಕ ಬಿಜೆಪಿ ನಾಯಕರ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇದರ ಬೆನ್ನಲ್ಲಿಯೇ ವಕ್ಫ್ ಕುರಿತ ಹೋರಾಟದ ವಿಚಾರದಲ್ಲಿ ಬಿಜೆಪಿ ರಾಜ್ಯ ನಾಯಕರನ್ನು ಹೊರಗಿಟ್ಟು ತಮ್ಮದೇ ನಾಯಕರ ತಂಡ ಸೃಷ್ಟಿಸಿಕೊಂಡು ಯತ್ನಾಳ್ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಆದರೆ, ಇದೊಂದು ಪಕ್ಷ ವಿರೋಧಿ ಕಾರ್ಯಕ್ರಮವೆಂದು ಹಾಗೂ ರಾಜ್ಯಾಧ್ಯಕ್ಷರಿಗೆ ನಾಲಿಗೆ ಹರಿಬಿಟ್ಟು ಪಕ್ಷದ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಹೈಕಮಾಂಡ್‌ನಿಂದ ನೋಟೀಸ್ ಜಾರಿ ಮಾಡಲಾಗಿದೆ. ಇದೀಗ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುತ್ತಿದ್ದು, ಯಾವ ಕ್ರಮ ಕೈಗೊಳ್ಳಲಿದೆ ಎಂಬ ತೀರ್ಮಾನ ಕುತೂಹಲ ಕೆರಳಿಸಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!