Mohammed Nalapad :  ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Mohammed Nalapad : ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Suvarna News   | Asianet News
Published : Jan 20, 2022, 02:48 PM IST

ಜಿಲ್ಲಾ ಯುತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಮೇಲೆ ಹಲ್ಲೆ
ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್
ಯುವ ಕಾಂಗ್ರೆಸ್ ಸಭೆಯ ವೇಳೆ ನಡೆದ ಘಟನೆ
 

ಬೆಂಗಳೂರು (ಜ.20): ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ (NA Haris) ಪುತ್ರ ಮೊಹಮದ್ ನಲಪಾಡ್ (Mohammed Nalapad) ವಿರುದ್ಧ ಮತ್ತೊಮ್ಮೆ ಹಲ್ಲೆ ಆರೋಪ ಕೇಳಿ ಬಂದಿದೆ. ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಮೇಲೆ ನಲಪಾಡ್ ಹಾಗೂ ಆತನ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಬುಧವಾರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

'ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಅಲ್ಲ: 2018ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು'
ಯಲಹಂಕದ ರೆಸಾರ್ಟ್ ನಲ್ಲಿ ಮೊಹಮದ್ ನಲಪಾಡ್ ಅವರ ಪದಗ್ರಹಣದ ಕುರಿತಾಗಿ ಚರ್ಚೆ ನಡೆಸಲಾಗಿತ್ತು. ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಬೆಂಬಲಿಗರಾಗಿದ್ದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಅವರ ಬೆಂಬಲಿಗರು ಹಾಗೂ ನಲಪಾಡ್ ಅವರ ನಡುವೆ ಗಲಾಟೆಯಾಗಿದೆ. "ಏನೋ ನೀನು ಮಂಜು ಗೌಡಗೆ ಬೆಂಬಲ ನೀಡ್ತೀರಾ" ಎಂದು ಹೇಳಿ ಸಿದ್ಧು ಹಳೇಗೌಡನ ಮೇಲೆ ಹಲ್ಲೆ ನಡೆಸಿದ್ದಾರೆ. ಸಿದ್ಧು ಅವರ ಸಹೋದರರಾದ ಪೃಥ್ವಿ ಹಾಗೂ ಕಿರಣ್ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಾಗಿ ದೂರು ನೀಡಲು ಮುಂದಾಗಿದ್ದ ಸಿದ್ಧು ಹಳೇಗೌಡ ಅವರ ಮನವೊಲಿಸಲು ಹಿರಿಯ ನಾಯಕರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more