Mohammed Nalapad :  ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Mohammed Nalapad : ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Suvarna News   | Asianet News
Published : Jan 20, 2022, 02:48 PM IST

ಜಿಲ್ಲಾ ಯುತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಮೇಲೆ ಹಲ್ಲೆ
ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್
ಯುವ ಕಾಂಗ್ರೆಸ್ ಸಭೆಯ ವೇಳೆ ನಡೆದ ಘಟನೆ
 

ಬೆಂಗಳೂರು (ಜ.20): ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ (NA Haris) ಪುತ್ರ ಮೊಹಮದ್ ನಲಪಾಡ್ (Mohammed Nalapad) ವಿರುದ್ಧ ಮತ್ತೊಮ್ಮೆ ಹಲ್ಲೆ ಆರೋಪ ಕೇಳಿ ಬಂದಿದೆ. ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಮೇಲೆ ನಲಪಾಡ್ ಹಾಗೂ ಆತನ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಬುಧವಾರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

'ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಅಲ್ಲ: 2018ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು'
ಯಲಹಂಕದ ರೆಸಾರ್ಟ್ ನಲ್ಲಿ ಮೊಹಮದ್ ನಲಪಾಡ್ ಅವರ ಪದಗ್ರಹಣದ ಕುರಿತಾಗಿ ಚರ್ಚೆ ನಡೆಸಲಾಗಿತ್ತು. ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಬೆಂಬಲಿಗರಾಗಿದ್ದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಅವರ ಬೆಂಬಲಿಗರು ಹಾಗೂ ನಲಪಾಡ್ ಅವರ ನಡುವೆ ಗಲಾಟೆಯಾಗಿದೆ. "ಏನೋ ನೀನು ಮಂಜು ಗೌಡಗೆ ಬೆಂಬಲ ನೀಡ್ತೀರಾ" ಎಂದು ಹೇಳಿ ಸಿದ್ಧು ಹಳೇಗೌಡನ ಮೇಲೆ ಹಲ್ಲೆ ನಡೆಸಿದ್ದಾರೆ. ಸಿದ್ಧು ಅವರ ಸಹೋದರರಾದ ಪೃಥ್ವಿ ಹಾಗೂ ಕಿರಣ್ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಾಗಿ ದೂರು ನೀಡಲು ಮುಂದಾಗಿದ್ದ ಸಿದ್ಧು ಹಳೇಗೌಡ ಅವರ ಮನವೊಲಿಸಲು ಹಿರಿಯ ನಾಯಕರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more