40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

Published : Apr 16, 2022, 12:26 PM IST

ಬಿಜೆಪಿ ಸರ್ಕಾರದ ವಿರುದ್ಧ ನಲವತ್ತು ಪರ್ಸೆಂಟ್ ಕಮೀಷನ್ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ಭರ್ಜರಿ ಪ್ಲ್ಯಾನ್ ಸಿದ್ಧ ಮಾಡಿದೆ. ಕಾಂಗ್ರೆಸ್ ಅವಧಿಯಲ್ಲಿ ಆದ ಎಲ್ಲಾ ಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.
 

ವಿಜಯನಗರ (ಏ.16): ಸರ್ಕಾರದ ಮೇಲೆ ಹೊರಿಸಿರುವ ನಲವತ್ತು ಪರ್ಸೆಂಟ್ ಕಮೀಷನ್ ಆರೋಪಕ್ಕೆ ಸಿಟ್ಟಾಗಿರುವ ಬಿಜೆಪಿ (BJP), ಆಕ್ರಮಣಕಾರಿ ಧೋರಣೆಯೊಂದಿಗೆ ಇದನ್ನು ವಿರೋಧಿಸಲು ಮುಂದಾಗಿದೆ. ಕಾಂಗ್ರೆಸ್ (Congress) ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ (Corruption) ದಾಖಲೆಯನ್ನು ಜನರ ಮುಂದಿಡುವ ಪ್ರಯತ್ನ ಮಾಡಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಅಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಗಂಭೀರ ಆರೋಪ ಹೊರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಶೀಘ್ರದಲ್ಲೇ ದಾಖಲೆ ಸಹಿತ ಜನರ ಬಳಿ ತೆರಳುವುದಾಗಿ ಕೇಸರಿ ಪಡೆ ತೊಡೆ ತಟ್ಟಿದೆ.

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್‌ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಪಟ್ಟು ಹಿಡಿದಿರುವ ಕಾಂಗ್ರೆಸ್, ಈಶ್ವರಪ್ಪ ರಾಜೀನಾಮೆಯಲ್ಲ ಅವಧ ಬಂಧನವಾಗಬೇಕು ಎಂದು ಹೇಳಿದೆ. ಇದರ ನಡುವೆ ಬಿಜೆಪಿ, ಕಾಂಗ್ರೆಸ್ ನ ತಂತ್ರಗಳಿಗೆ ಅವರ ಅಕ್ರಮದ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡುವ ಸಿದ್ಧತೆಯಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more