Karnataka Rain: ಬೊಮ್ಮಾಯಿಯವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ, ಇನ್ನಾದ್ರೂ ಜನರ ಕಷ್ಟ ಕೇಳ್ರಿ'

Karnataka Rain: ಬೊಮ್ಮಾಯಿಯವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ, ಇನ್ನಾದ್ರೂ ಜನರ ಕಷ್ಟ ಕೇಳ್ರಿ'

Published : Nov 21, 2021, 03:03 PM ISTUpdated : Nov 21, 2021, 05:25 PM IST

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ. 

ಬೆಂಗಳೂರು (ನ. 21): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ, (Siddaramaiah) ಆಡಳಿತಾರೂಢ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ಬೊಮ್ಮಾಯಿಯವರೇ, (CM Bommai) ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ.  ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ. 

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more