ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್:  ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

Published : Jun 22, 2023, 02:46 PM IST

ರಾಜ್ಯದಲ್ಲಿ ಗ್ಯಾಸ್‌, ಹಾಲು, ಬೇಳೆ ಹಾಗೂ ವಿದ್ಯುತ್‌ ದರದ ಹೆಚ್ಚಳ ಬೆನ್ನಲ್ಲೇ ಈಗ ಅಕ್ಕಿಯ ದರವನ್ನೂ ಹೆಚ್ಚಳ ಮಾಡಲು ರೈಸ್‌ಮಿಲ್‌ ಮಾಲೀಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಜೂ.22): ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಿಲ್ಲುತ್ತಲೇ ಇಲ್ಲ ಅಕ್ಕಿ ಗಲಾಟೆ. ಅನ್ನ ಭಾಗ್ಯಕ್ಕೆ ಸರ್ಕಾರದ ಪರದಾಡುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೇ ಮಾರುಕಟ್ಟೆಯಲ್ಲಿರುವ ಅಕ್ಕಿಯ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ರಾಜ್ಯದ ರೈಸ್ ಮಿಲ್ ಮಾಲೀಕರು ಮುಂದಾಗಿದ್ದಾರೆ. ಅನ್ನಭಾಗ್ಯಕ್ಕೂ ಮುನ್ನವೇ ಅಕ್ಕಿ ದರ ಏರಿಕಯಾಗುವ ಮುನ್ಸೂಚನೆ ಕಂಡುಬರುತ್ತಿದೆ. 

ಅಕ್ಕಿ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಒಂದು ಕಡೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಅಕ್ಕಿ ಕೊಡ್ತಿಲ್ಲ ಅನ್ನೋ ಕಾರಣಕ್ಕೆ ಪ್ರತಿಭಟನೆ ಮಾಡ್ತಾ ಇದ್ರೆ ಇನ್ನೊಂದು ಕಡೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದೆ. ಈ ನಡುವೆ ಅಕ್ಕಿ ಮಿಲ್ ಮಾಲೀಕರು ಅಕ್ಕಿ ದರವನ್ನ ಹೆಚ್ಚಿಸೋ ಚಿಂತನೆಯಲ್ಲಿ ಇದಾರೆ. ಯಾಕಾಗಿ ಅಕ್ಕಿ ಬೆಲೆ ಏರಿಕೆ ಮಾತು ಬಂದಿರೋದು..? ಅದರ ಹಿಂದಿನ ಕಾರಣವೇನು? ಅಕ್ಕಿ ದರವನ್ನ ಕೆಜಿಗೆ 5 ರಿಂದ 10 ರೂಪಾಯಿ ಹೆಚ್ಚಳ ಮಾಡೋದಕ್ಕೆ ಮಿಲ್ ಮಾಲೀಕರು ಕಾರಣವನ್ನೂ ಕೊಡ್ತಿದ್ದಾರೆ. 

ಅಕ್ಕಿ ದರ ಏರಿಕೆ ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗೋದು ಖಚಿತ. ಆದರೆ ಅಕ್ಕಿತ ದರ ಏರಿಕೆ ಮಾಡದಿದ್ದರೆ ರೈಸ್‌ ಮಿಲ್‌ ಮಾಲೀಕರು ಬದುಕೋಕೆ ಆಗೋದಿಲ್ಲ ಅನ್ನೋದು ಎಂದು ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಬರೋದನ್ನ ಬಿಪಿಎಲ್ ಕಾರ್ಡ್ ಇರೋರು ಎದುರು ನೋಡ್ತಾ ಇದ್ದರೆ, ಅಕ್ಕಿ ದರ ಏರಿಕೆ ಸುಳಿವನ್ನ ಕೊಟ್ಟಿರೋ ಅಕ್ಕಿ ಮಿಲ್ ಮಾಲೀಕರು ಮಧ್ಯಮ ವರ್ಗಕ್ಕೆ ಶಾಕ್ ಕೊಟ್ಟಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more