ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್:  ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

Published : Jun 22, 2023, 02:46 PM IST

ರಾಜ್ಯದಲ್ಲಿ ಗ್ಯಾಸ್‌, ಹಾಲು, ಬೇಳೆ ಹಾಗೂ ವಿದ್ಯುತ್‌ ದರದ ಹೆಚ್ಚಳ ಬೆನ್ನಲ್ಲೇ ಈಗ ಅಕ್ಕಿಯ ದರವನ್ನೂ ಹೆಚ್ಚಳ ಮಾಡಲು ರೈಸ್‌ಮಿಲ್‌ ಮಾಲೀಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಜೂ.22): ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಿಲ್ಲುತ್ತಲೇ ಇಲ್ಲ ಅಕ್ಕಿ ಗಲಾಟೆ. ಅನ್ನ ಭಾಗ್ಯಕ್ಕೆ ಸರ್ಕಾರದ ಪರದಾಡುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೇ ಮಾರುಕಟ್ಟೆಯಲ್ಲಿರುವ ಅಕ್ಕಿಯ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ರಾಜ್ಯದ ರೈಸ್ ಮಿಲ್ ಮಾಲೀಕರು ಮುಂದಾಗಿದ್ದಾರೆ. ಅನ್ನಭಾಗ್ಯಕ್ಕೂ ಮುನ್ನವೇ ಅಕ್ಕಿ ದರ ಏರಿಕಯಾಗುವ ಮುನ್ಸೂಚನೆ ಕಂಡುಬರುತ್ತಿದೆ. 

ಅಕ್ಕಿ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಒಂದು ಕಡೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಅಕ್ಕಿ ಕೊಡ್ತಿಲ್ಲ ಅನ್ನೋ ಕಾರಣಕ್ಕೆ ಪ್ರತಿಭಟನೆ ಮಾಡ್ತಾ ಇದ್ರೆ ಇನ್ನೊಂದು ಕಡೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದೆ. ಈ ನಡುವೆ ಅಕ್ಕಿ ಮಿಲ್ ಮಾಲೀಕರು ಅಕ್ಕಿ ದರವನ್ನ ಹೆಚ್ಚಿಸೋ ಚಿಂತನೆಯಲ್ಲಿ ಇದಾರೆ. ಯಾಕಾಗಿ ಅಕ್ಕಿ ಬೆಲೆ ಏರಿಕೆ ಮಾತು ಬಂದಿರೋದು..? ಅದರ ಹಿಂದಿನ ಕಾರಣವೇನು? ಅಕ್ಕಿ ದರವನ್ನ ಕೆಜಿಗೆ 5 ರಿಂದ 10 ರೂಪಾಯಿ ಹೆಚ್ಚಳ ಮಾಡೋದಕ್ಕೆ ಮಿಲ್ ಮಾಲೀಕರು ಕಾರಣವನ್ನೂ ಕೊಡ್ತಿದ್ದಾರೆ. 

ಅಕ್ಕಿ ದರ ಏರಿಕೆ ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗೋದು ಖಚಿತ. ಆದರೆ ಅಕ್ಕಿತ ದರ ಏರಿಕೆ ಮಾಡದಿದ್ದರೆ ರೈಸ್‌ ಮಿಲ್‌ ಮಾಲೀಕರು ಬದುಕೋಕೆ ಆಗೋದಿಲ್ಲ ಅನ್ನೋದು ಎಂದು ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಬರೋದನ್ನ ಬಿಪಿಎಲ್ ಕಾರ್ಡ್ ಇರೋರು ಎದುರು ನೋಡ್ತಾ ಇದ್ದರೆ, ಅಕ್ಕಿ ದರ ಏರಿಕೆ ಸುಳಿವನ್ನ ಕೊಟ್ಟಿರೋ ಅಕ್ಕಿ ಮಿಲ್ ಮಾಲೀಕರು ಮಧ್ಯಮ ವರ್ಗಕ್ಕೆ ಶಾಕ್ ಕೊಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more