ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್:  ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಶೀಘ್ರದಲ್ಲಿಯೇ ಅಕ್ಕಿ ದರ 10 ರೂ. ಹೆಚ್ಚಳ

Published : Jun 22, 2023, 02:46 PM IST

ರಾಜ್ಯದಲ್ಲಿ ಗ್ಯಾಸ್‌, ಹಾಲು, ಬೇಳೆ ಹಾಗೂ ವಿದ್ಯುತ್‌ ದರದ ಹೆಚ್ಚಳ ಬೆನ್ನಲ್ಲೇ ಈಗ ಅಕ್ಕಿಯ ದರವನ್ನೂ ಹೆಚ್ಚಳ ಮಾಡಲು ರೈಸ್‌ಮಿಲ್‌ ಮಾಲೀಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಜೂ.22): ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಿಲ್ಲುತ್ತಲೇ ಇಲ್ಲ ಅಕ್ಕಿ ಗಲಾಟೆ. ಅನ್ನ ಭಾಗ್ಯಕ್ಕೆ ಸರ್ಕಾರದ ಪರದಾಡುತ್ತಿರುವ ಬೆನ್ನಲ್ಲೇ, ಸದ್ದಿಲ್ಲದೇ ಮಾರುಕಟ್ಟೆಯಲ್ಲಿರುವ ಅಕ್ಕಿಯ ದರವನ್ನು ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ರಾಜ್ಯದ ರೈಸ್ ಮಿಲ್ ಮಾಲೀಕರು ಮುಂದಾಗಿದ್ದಾರೆ. ಅನ್ನಭಾಗ್ಯಕ್ಕೂ ಮುನ್ನವೇ ಅಕ್ಕಿ ದರ ಏರಿಕಯಾಗುವ ಮುನ್ಸೂಚನೆ ಕಂಡುಬರುತ್ತಿದೆ. 

ಅಕ್ಕಿ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಒಂದು ಕಡೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಅಕ್ಕಿ ಕೊಡ್ತಿಲ್ಲ ಅನ್ನೋ ಕಾರಣಕ್ಕೆ ಪ್ರತಿಭಟನೆ ಮಾಡ್ತಾ ಇದ್ರೆ ಇನ್ನೊಂದು ಕಡೆ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿದೆ. ಈ ನಡುವೆ ಅಕ್ಕಿ ಮಿಲ್ ಮಾಲೀಕರು ಅಕ್ಕಿ ದರವನ್ನ ಹೆಚ್ಚಿಸೋ ಚಿಂತನೆಯಲ್ಲಿ ಇದಾರೆ. ಯಾಕಾಗಿ ಅಕ್ಕಿ ಬೆಲೆ ಏರಿಕೆ ಮಾತು ಬಂದಿರೋದು..? ಅದರ ಹಿಂದಿನ ಕಾರಣವೇನು? ಅಕ್ಕಿ ದರವನ್ನ ಕೆಜಿಗೆ 5 ರಿಂದ 10 ರೂಪಾಯಿ ಹೆಚ್ಚಳ ಮಾಡೋದಕ್ಕೆ ಮಿಲ್ ಮಾಲೀಕರು ಕಾರಣವನ್ನೂ ಕೊಡ್ತಿದ್ದಾರೆ. 

ಅಕ್ಕಿ ದರ ಏರಿಕೆ ಆದರೆ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗೋದು ಖಚಿತ. ಆದರೆ ಅಕ್ಕಿತ ದರ ಏರಿಕೆ ಮಾಡದಿದ್ದರೆ ರೈಸ್‌ ಮಿಲ್‌ ಮಾಲೀಕರು ಬದುಕೋಕೆ ಆಗೋದಿಲ್ಲ ಅನ್ನೋದು ಎಂದು ಹೇಳುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆ ಬರೋದನ್ನ ಬಿಪಿಎಲ್ ಕಾರ್ಡ್ ಇರೋರು ಎದುರು ನೋಡ್ತಾ ಇದ್ದರೆ, ಅಕ್ಕಿ ದರ ಏರಿಕೆ ಸುಳಿವನ್ನ ಕೊಟ್ಟಿರೋ ಅಕ್ಕಿ ಮಿಲ್ ಮಾಲೀಕರು ಮಧ್ಯಮ ವರ್ಗಕ್ಕೆ ಶಾಕ್ ಕೊಟ್ಟಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more