ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

Published : Jun 29, 2023, 04:56 PM IST

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆಯಲ್ಲಿ ಪತಿರಾಯ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಬೆಂಗಳೂರು (ಜೂ.29): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಇದನ್ನು ನೋಡಿ ತಬ್ಬಿಬ್ಬಾದ ಬಸ್‌ ಚಾಲಕ ತಬ್ಬಿಬ್ಬಾಗಿದ್ದಾನೆ. ನಂತರ ಆತನನ್ನು ಮನವೊಲಿಸಿ ಬಸ್‌ ಚಕ್ರದಡಿಯಿಂದ ಹೊರಗೆ ಬರುವಂತೆ ಮನವಿ ಮಾಡಿದರೂ ಬಂದಿಲ್ಲ. ಗಟ್ಟಿಯಾಗಿ ಬಸ್‌ ಚಕ್ರವನ್ನು ಹಿಡಿದುಕೊಂಡು ನನ್ನ ಮೇಲೆ ಬಸ್‌ ಹತ್ತಿಸಿ ಸಾಯಿಸಿ ಎಂದು ಹಠ ಮಾಡಿದ್ದಾನೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿರುವ ಸರ್ಕಾರಕ್ಕೆ ನನ್ನ ಸಾವಿನಿಂದ ಬುದ್ಧಿ ಕಲಿಯಲಿ ಎಂದು ಹೇಳಿದ್ದಾನೆ. ಇನ್ನು ಈ ಘಟನೆ ಬುಧವಾರ ಸಂಜೆ ನಡೆದಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್‌ ಸಂಚಾರ ಸ್ಥಗಿತವಾಗಿತ್ತು. ಇನ್ನು ಈ ಬಗ್ಗೆ ಬಸ್‌ ಡ್ರೈವರ್‌ ಪೊಲೀಸರಿಗ ಮಾಹಿತಿ ನೀಡಿದ್ದು, ನಂತರ ಪೊಲೀಸರು ಆತನನ್ನು ಚಕ್ರದಿಂದ ಹೊರಗೆ ಕರೆತಂದಿದ್ದಾರೆ. ಈ ವೇಳೆ ಮದ್ಯಸೇವನೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more