ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

Published : Jun 29, 2023, 04:56 PM IST

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆಯಲ್ಲಿ ಪತಿರಾಯ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಬೆಂಗಳೂರು (ಜೂ.29): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಇದನ್ನು ನೋಡಿ ತಬ್ಬಿಬ್ಬಾದ ಬಸ್‌ ಚಾಲಕ ತಬ್ಬಿಬ್ಬಾಗಿದ್ದಾನೆ. ನಂತರ ಆತನನ್ನು ಮನವೊಲಿಸಿ ಬಸ್‌ ಚಕ್ರದಡಿಯಿಂದ ಹೊರಗೆ ಬರುವಂತೆ ಮನವಿ ಮಾಡಿದರೂ ಬಂದಿಲ್ಲ. ಗಟ್ಟಿಯಾಗಿ ಬಸ್‌ ಚಕ್ರವನ್ನು ಹಿಡಿದುಕೊಂಡು ನನ್ನ ಮೇಲೆ ಬಸ್‌ ಹತ್ತಿಸಿ ಸಾಯಿಸಿ ಎಂದು ಹಠ ಮಾಡಿದ್ದಾನೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿರುವ ಸರ್ಕಾರಕ್ಕೆ ನನ್ನ ಸಾವಿನಿಂದ ಬುದ್ಧಿ ಕಲಿಯಲಿ ಎಂದು ಹೇಳಿದ್ದಾನೆ. ಇನ್ನು ಈ ಘಟನೆ ಬುಧವಾರ ಸಂಜೆ ನಡೆದಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್‌ ಸಂಚಾರ ಸ್ಥಗಿತವಾಗಿತ್ತು. ಇನ್ನು ಈ ಬಗ್ಗೆ ಬಸ್‌ ಡ್ರೈವರ್‌ ಪೊಲೀಸರಿಗ ಮಾಹಿತಿ ನೀಡಿದ್ದು, ನಂತರ ಪೊಲೀಸರು ಆತನನ್ನು ಚಕ್ರದಿಂದ ಹೊರಗೆ ಕರೆತಂದಿದ್ದಾರೆ. ಈ ವೇಳೆ ಮದ್ಯಸೇವನೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more