ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

Published : Jun 29, 2023, 04:56 PM IST

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆಯಲ್ಲಿ ಪತಿರಾಯ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಬೆಂಗಳೂರು (ಜೂ.29): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಇದನ್ನು ನೋಡಿ ತಬ್ಬಿಬ್ಬಾದ ಬಸ್‌ ಚಾಲಕ ತಬ್ಬಿಬ್ಬಾಗಿದ್ದಾನೆ. ನಂತರ ಆತನನ್ನು ಮನವೊಲಿಸಿ ಬಸ್‌ ಚಕ್ರದಡಿಯಿಂದ ಹೊರಗೆ ಬರುವಂತೆ ಮನವಿ ಮಾಡಿದರೂ ಬಂದಿಲ್ಲ. ಗಟ್ಟಿಯಾಗಿ ಬಸ್‌ ಚಕ್ರವನ್ನು ಹಿಡಿದುಕೊಂಡು ನನ್ನ ಮೇಲೆ ಬಸ್‌ ಹತ್ತಿಸಿ ಸಾಯಿಸಿ ಎಂದು ಹಠ ಮಾಡಿದ್ದಾನೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿರುವ ಸರ್ಕಾರಕ್ಕೆ ನನ್ನ ಸಾವಿನಿಂದ ಬುದ್ಧಿ ಕಲಿಯಲಿ ಎಂದು ಹೇಳಿದ್ದಾನೆ. ಇನ್ನು ಈ ಘಟನೆ ಬುಧವಾರ ಸಂಜೆ ನಡೆದಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್‌ ಸಂಚಾರ ಸ್ಥಗಿತವಾಗಿತ್ತು. ಇನ್ನು ಈ ಬಗ್ಗೆ ಬಸ್‌ ಡ್ರೈವರ್‌ ಪೊಲೀಸರಿಗ ಮಾಹಿತಿ ನೀಡಿದ್ದು, ನಂತರ ಪೊಲೀಸರು ಆತನನ್ನು ಚಕ್ರದಿಂದ ಹೊರಗೆ ಕರೆತಂದಿದ್ದಾರೆ. ಈ ವೇಳೆ ಮದ್ಯಸೇವನೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more