ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

ಫ್ರೀ ಬಸ್‌ ಹತ್ಕೊಂಡು ಹೆಂಡ್ತಿ ಊರಿಗೋದ್ಲು ಅಂತ, ಬಸ್‌ ಗಾಲಿಗೆ ತಲೆಕೊಟ್ಟ ಪತಿರಾಯ: ಡ್ರೈವರ್‌ ತಬ್ಬಿಬ್ಬು!

Published : Jun 29, 2023, 04:56 PM IST

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆಯಲ್ಲಿ ಪತಿರಾಯ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಬೆಂಗಳೂರು (ಜೂ.29): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣದ ಬಸ್‌ ಹತ್ತಿಕೊಂಡು ಪ್ರವಾಸಕ್ಕೆ ಹೋದ ತನ್ನ ಪತ್ನಿ ಇನ್ನೂ ಬಂದಿಲ್ಲವೆಂದು ಹೊಸಕೋಟೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಗಾಲಿಗೆ ತಲೆಕೊಟ್ಟು ಮಲಗಿದ್ದಾನೆ.

ಇದನ್ನು ನೋಡಿ ತಬ್ಬಿಬ್ಬಾದ ಬಸ್‌ ಚಾಲಕ ತಬ್ಬಿಬ್ಬಾಗಿದ್ದಾನೆ. ನಂತರ ಆತನನ್ನು ಮನವೊಲಿಸಿ ಬಸ್‌ ಚಕ್ರದಡಿಯಿಂದ ಹೊರಗೆ ಬರುವಂತೆ ಮನವಿ ಮಾಡಿದರೂ ಬಂದಿಲ್ಲ. ಗಟ್ಟಿಯಾಗಿ ಬಸ್‌ ಚಕ್ರವನ್ನು ಹಿಡಿದುಕೊಂಡು ನನ್ನ ಮೇಲೆ ಬಸ್‌ ಹತ್ತಿಸಿ ಸಾಯಿಸಿ ಎಂದು ಹಠ ಮಾಡಿದ್ದಾನೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿರುವ ಸರ್ಕಾರಕ್ಕೆ ನನ್ನ ಸಾವಿನಿಂದ ಬುದ್ಧಿ ಕಲಿಯಲಿ ಎಂದು ಹೇಳಿದ್ದಾನೆ. ಇನ್ನು ಈ ಘಟನೆ ಬುಧವಾರ ಸಂಜೆ ನಡೆದಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್‌ ಸಂಚಾರ ಸ್ಥಗಿತವಾಗಿತ್ತು. ಇನ್ನು ಈ ಬಗ್ಗೆ ಬಸ್‌ ಡ್ರೈವರ್‌ ಪೊಲೀಸರಿಗ ಮಾಹಿತಿ ನೀಡಿದ್ದು, ನಂತರ ಪೊಲೀಸರು ಆತನನ್ನು ಚಕ್ರದಿಂದ ಹೊರಗೆ ಕರೆತಂದಿದ್ದಾರೆ. ಈ ವೇಳೆ ಮದ್ಯಸೇವನೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more