ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..

ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..

Published : Aug 16, 2023, 08:03 PM IST

ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರು (ಆ.16): ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳ ಕೇಳಿ ಬರ್ತಿದೆ. ಇದನ್ನ ಒಂದು ಪಕ್ಷ ಮಾಡಿಸ್ತಿದ್ದಾರೆ. ಆದರೆ, ರಾಜ್ಯದಲ್ಲಿ ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಯಾರೂ ಕೂಡ ಪಾಸ್ ಪಡೆಯುವ ಅಗತ್ಯ ಇಲ್ಲ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೆವೆ.. 10 ವರ್ಷವೂ ಈ ಯೋಜನೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನು ಸಾಮಾಜಿಕ‌ ಜಾಲತಾಣಗಳಲ್ಲಿ  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂದು ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!