News Hour: ಕಮಿಷನ್ ಇಕ್ಕಟ್ಟಿಗೆ ಸಿಲುಕಿತಾ ರಾಜ್ಯ ಸರ್ಕಾರ..?

News Hour: ಕಮಿಷನ್ ಇಕ್ಕಟ್ಟಿಗೆ ಸಿಲುಕಿತಾ ರಾಜ್ಯ ಸರ್ಕಾರ..?

Published : Aug 24, 2022, 11:07 PM IST

ರಾಜ್ಯ ರಾಜಕೀಯದಲ್ಲಿ ಮತ್ತೆ ಕಮಿಷನ್‌ ವಿಚಾರ ಮುನ್ನಲೆಗೆ ಬಂದಿದೆ. ಬುಧವಾರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪದಾಧಿಕಾರಿಗಳೊಂದಿಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು. ಆ ಬಳಿಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
 

ಬೆಂಗಳೂರು (ಆ. 24): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತೊಮ್ಮೆ ಕಮಿಷನ್‌ ಆರೋಪ ಮಾಡಿದ್ದಾರೆ. ಬುಧವಾರ ಸಂಘದ ಪದಾಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್‌ ವ್ಯವಹಾರದ ಬಗ್ಗೆ ಚರ್ಚೆ ಮಾಡಿದರು. ಸಿದ್ಧರಾಮಯ್ಯ ಭೇಟಿಯ ಬಳಿಕ ಕೆಂಪಣ್ಣ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮೊದಲು ಆಮೆಯ ವೇಗದಲ್ಲಿತ್ತು. ಈಗ ಅದು ಶರವೇದಲ್ಲಿದೆ ಎಂದು ಕೆಂಪಣ್ಣ ಹೇಳಿದ್ದಾರೆ. 22 ಸಾವಿರ ಕೋಟಿ ರೂಪಾಯಿ ಬಿಲ್‌ ಬಾಕಿ ಇದೆ  ಎಂದು ಹೇಳಿದ್ದಾರೆ. ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದ ಕಮೀಷನ್, ಶಾಸಕ, ಸಚಿವರ ವಿರುದ್ಧ ಸ್ಫೋಟಕ ಆರೋಪ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಂಪಣ್ಣ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರು ದಾಖಲೆಯ ಜೊತೆಗೆ ಲೋಕಾಯುಕ್ತಕ್ಕೆ ದೂರು ನೀಡಲಿ. ಕೂಡಲೇ ತನಿಖೆಯೂ ಆಗಲಿ. ಇವೆಲ್ಲವೂ ಅಧಾರ ರಹಿತ ಆರೋಪ. ಹಿಂದಿನ ಎಲ್ಲಾ ಅರೋಪಗಳಿಗೂ ಸರ್ಕಾರ ಕ್ರಮ ಕೈಗೊಂಡಿದೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲನೆ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more