News Hour: ಸರ್ಕಾರದ ಹೊಸ ಕಾರುಬಾರು, ಊರೂರಿಗೆ ಬಾರು ಎಂದ ಡಿಸಿಎಂ, ಚಾನ್ಸೇ ಇಲ್ಲ ಅಂದ ಸಿಎಂ!

News Hour: ಸರ್ಕಾರದ ಹೊಸ ಕಾರುಬಾರು, ಊರೂರಿಗೆ ಬಾರು ಎಂದ ಡಿಸಿಎಂ, ಚಾನ್ಸೇ ಇಲ್ಲ ಅಂದ ಸಿಎಂ!

Published : Oct 06, 2023, 11:05 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಿಗ್ ಇಂಪ್ಯಾಕ್ಟ್. ಹೊಸ ಬಾರ್ ಓಪನ್ ಪ್ರಸ್ತಾವನೆಗೆ ಸರ್ಕಾರ ಬ್ರೇಕ್‌ ಹಾಕಿದೆ. ಆದರೆ, ಡಿಸಿಎಂ ಮಾತ್ರ ಹೊಸ ಬಾರ್‌ಗಳನ್ನು ತೆರೆದೇ ತೆರೆಯುತ್ತೇವೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಅ.6): ಗ್ರಾಮ ಪಂಚಾಯಿತಿ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ಹೊಸದಾಗಿ 389 ಮದ್ಯದಂಗಡಿ ತೆರೆಯುವ ರಾಜ್ಯ ಸರ್ಕಾರದ ಪ್ಲಾನ್ ಭಾರಿ ವಿರೋಧಕ್ಕೆ ಕಾರಣವಾಗಿತ್ತು.. ಜಿಲ್ಲೆ ಜಿಲ್ಲೆಯಲ್ಲೂ ಮಹಿಳೆಯರು ದಂಗೆ ಎದ್ದಿದ್ದರು. ಪ್ರತಿಭಟನೆ ಕಹಳೆ ಮೊಳಗಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದರು.

ಅನೇಕ ಸಂಘಟನೆಗಳು, ಕೆಲ ಕಾಂಗ್ರೆಸ್ ನಾಯಕರುಕೂಡ ವಿರೋಧಿಸಿದ್ದರು. ಏಷ್ಯಾನೆಟ್ ಸುವರ್ಣ ನ್ಯೂಸ್ ಕೂಡ ಈ ಬಗ್ಗೆ ವರದಿ ಪ್ರಸಾರ ಮಾಡಿತ್ತು.. ಕೊನೆಗೂ ಮಹಿಳೆಯರ ಆಕ್ರೋಶಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ ಯಾವುದೇ ಬಾರ್ ತೆರೆಯಲ್ಲ ಅನ್ನೋ ಭರವಸೆ ನೀಡಿದ್ದಾರೆ.  ಸಿಎಂ ಸಿದ್ದರಾಮಯ್ಯ, ಹೊಸ ಬಾರ್ ತೆರೆಯುವ ಪ್ರಸ್ತಾವನೆ ನಮ್ಮ ಮುಂದಿಲ್ಲ, ಯಾವುದೇ ಕಾರಣಕ್ಕೂ ಹೊಸ ಮದ್ಯದಂಗಡಿ ತೆರೆಯಲ್ಲ ಎಂದಿದ್ದಾರೆ.

ಗ್ಯಾರಂಟಿಗಳಿಗೆ ಖರ್ಚಾದ ಹಣ ಸಂಗ್ರಹಕ್ಕೆ ಮದ್ಯ ಮಾರಾಟದ ಪಂಚಸೂತ್ರ ಸಿದ್ಧಪಡಿಸಿದ ಸರ್ಕಾರ!

ಆದರೆ, ಇತ್ತ ಡಿಸಿಎಂ ಡಿಕೆ ಶಿವಕುಮಾರ್, ಕುಡಿಯುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ, 30 ವರ್ಷದಿಂದ ಅಬಕಾರಿ ಲೈಸೆನ್ಸ್ ನೀಡಿಲ್ಲ ಅನ್ನೋ ಮೂಲಕ ಹೊಸ ಬಾರ್ ತೆರೆಯುವ ಸುಳಿವು ಕೊಟ್ಟಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!