ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

Published : Oct 26, 2023, 10:38 PM IST

ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಎಲ್ಲರಿಗೂ ಒಂದೇನಾ? ಹಾಗಾಗಿರಲು ಸಾಧ್ಯವೇ ಇಲ್ಲ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಬಡವರಿಗೆ ಒಂದು ನ್ಯಾಯ, ದುಡ್ಡಿದ್ದ ಹೆಸರಾಂತ ಸೆಲೆಬ್ರಿಟಿಗಳು ರಾಜಕಾರಣಿಗಳಿಗೆ ಮತ್ತೊಂದು ನ್ಯಾಯ ಅನ್ನೋದು ಹುಲಿ ಉಗುರಿನ ಪೆಂಡೆಂಟ್‌ ಕೇಸ್‌ನಲ್ಲಿ ಸಾಬೀತಾಗಿದೆ.
 

ಬೆಂಗಳೂರು (ಅ.26): ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್‌ಗಳನ್ನು ಸಾಮಾನ್ಯ ನಾಗರೀಕರು, ರೈತರು ಧರಿಸುವಂತಿಲ್ಲ. ಆದರೆ, ಸೆಲೆಬ್ರಿಟಿಗಳು ರಾಜಕಾರಣಿಗಳು ಧರಿಸಬಹುದು. ಹಾಗೇನಾದರೂ ಇದಕ್ಕೆ ದೂರುಗಳು ಬಂದರೆ, ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳೇ ಪರಿಶೀಲಿಸಿ ಅದು ನಕಲಿ ಎಂದು ತೀರ್ಪು ನೀಡಿ ಬಿಡುತ್ತಾರೆ. ಆದರೆ, ಬಡವ ಧರಿಸಿದ್ದ ಪೆಂಡೆಂಟ್‌ ನಕಲಿ ಎಂದು ಹೇಳಿದರೆ, ಅದನ್ನು ಎಫ್‌ಎಫ್‌ಎಲ್‌ಗೆ ಕಳಿಸಿ ಅದು ಹುಲಿ ಉಗುರೇ ಅಲ್ಲವೇ ಎಂದು ತೀರ್ಮಾನಿಸುತ್ತಾರೆ. ಅಲ್ಲಿಯವರೆಗೂ ಆತ ಜೈಲಿನಲ್ಲಿರಬೇಕು. ಇಂಥದ್ದೊಂದು ಹೊಸ ನ್ಯಾಯವನ್ನು ಕರ್ನಾಟಕದ ಅರಣ್ಯ ಇಲಾಖೆ ಪರಿಚಯಿಸಿದೆ.

ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ ಬೆನ್ನಲ್ಲಿಯೇ ಸೋಶಿಯಲ್‌ ಮೀಡಿಯಾದಲ್ಲಿ ಅದೇ ರೀತಿಯ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕನಿಷ್ಠ 40ಕ್ಕೂ ಅಧಿಕ ಪ್ರಕರಣಗಳನ್ನು ಮಾಧ್ಯಮಗಳೇ ವರದಿ ಮಾಡಿವೆ. ಇವರೆಲ್ಲರೂ ಸೆಲೆಬ್ರಿಟಿಗಳು. ಇದು ಗೊತ್ತಾದ ಬೆನ್ನಲ್ಲಿಯೇ ಅವರ ಮೇಲೂ ಕ್ರಮ ಕೈಗೊಂಡಿದ್ದೇವೆ ಎನ್ನುವ ರೀತಿಯಲ್ಲಿ ಕೆಲ ದಾಳಿ ಮಾಡಿದ್ದಾರೆ.

ಪಡ್ಡೆ ಹುಡುಗರ ನಿದ್ದೆ ಕದ್ದ ಮಾಳವಿಕಾ ಮೋಹನನ್‌ ಒದ್ದೆ ಸೀರೆಯ ಹಾಟ್‌ ಫೋಟೋಸ್‌!

ಆದರೆ ಈ ಪೈಕಿ ಯಾರೊಬ್ಬರನ್ನೂ ಬಂಧಿಸಿಲ್ಲ. ಅದರ ಬದಲು ಸ್ವತಃ ಅರಣ್ಯ ಅಧಿಕಾರಿಗಳೇ ಅವರ ಬಳಿ ಇರುವುದು ನಕಲಿ ಪೆಂಡೆಂಟ್‌, ಇನ್ನು ಜಗ್ಗೇಶ್‌ ಅವರ ಬಳಿ ಇರುವುದು 40 ವರ್ಷದ ಹಿಂದಿನ ಪೆಂಡೆಂಟ್‌ ಎಂದು ಹೇಳುವ ಮೂಲಕ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!