ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!

Published : Oct 26, 2023, 10:38 PM IST

ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಎಲ್ಲರಿಗೂ ಒಂದೇನಾ? ಹಾಗಾಗಿರಲು ಸಾಧ್ಯವೇ ಇಲ್ಲ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಬಡವರಿಗೆ ಒಂದು ನ್ಯಾಯ, ದುಡ್ಡಿದ್ದ ಹೆಸರಾಂತ ಸೆಲೆಬ್ರಿಟಿಗಳು ರಾಜಕಾರಣಿಗಳಿಗೆ ಮತ್ತೊಂದು ನ್ಯಾಯ ಅನ್ನೋದು ಹುಲಿ ಉಗುರಿನ ಪೆಂಡೆಂಟ್‌ ಕೇಸ್‌ನಲ್ಲಿ ಸಾಬೀತಾಗಿದೆ.
 

ಬೆಂಗಳೂರು (ಅ.26): ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್‌ಗಳನ್ನು ಸಾಮಾನ್ಯ ನಾಗರೀಕರು, ರೈತರು ಧರಿಸುವಂತಿಲ್ಲ. ಆದರೆ, ಸೆಲೆಬ್ರಿಟಿಗಳು ರಾಜಕಾರಣಿಗಳು ಧರಿಸಬಹುದು. ಹಾಗೇನಾದರೂ ಇದಕ್ಕೆ ದೂರುಗಳು ಬಂದರೆ, ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳೇ ಪರಿಶೀಲಿಸಿ ಅದು ನಕಲಿ ಎಂದು ತೀರ್ಪು ನೀಡಿ ಬಿಡುತ್ತಾರೆ. ಆದರೆ, ಬಡವ ಧರಿಸಿದ್ದ ಪೆಂಡೆಂಟ್‌ ನಕಲಿ ಎಂದು ಹೇಳಿದರೆ, ಅದನ್ನು ಎಫ್‌ಎಫ್‌ಎಲ್‌ಗೆ ಕಳಿಸಿ ಅದು ಹುಲಿ ಉಗುರೇ ಅಲ್ಲವೇ ಎಂದು ತೀರ್ಮಾನಿಸುತ್ತಾರೆ. ಅಲ್ಲಿಯವರೆಗೂ ಆತ ಜೈಲಿನಲ್ಲಿರಬೇಕು. ಇಂಥದ್ದೊಂದು ಹೊಸ ನ್ಯಾಯವನ್ನು ಕರ್ನಾಟಕದ ಅರಣ್ಯ ಇಲಾಖೆ ಪರಿಚಯಿಸಿದೆ.

ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ ಬೆನ್ನಲ್ಲಿಯೇ ಸೋಶಿಯಲ್‌ ಮೀಡಿಯಾದಲ್ಲಿ ಅದೇ ರೀತಿಯ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕನಿಷ್ಠ 40ಕ್ಕೂ ಅಧಿಕ ಪ್ರಕರಣಗಳನ್ನು ಮಾಧ್ಯಮಗಳೇ ವರದಿ ಮಾಡಿವೆ. ಇವರೆಲ್ಲರೂ ಸೆಲೆಬ್ರಿಟಿಗಳು. ಇದು ಗೊತ್ತಾದ ಬೆನ್ನಲ್ಲಿಯೇ ಅವರ ಮೇಲೂ ಕ್ರಮ ಕೈಗೊಂಡಿದ್ದೇವೆ ಎನ್ನುವ ರೀತಿಯಲ್ಲಿ ಕೆಲ ದಾಳಿ ಮಾಡಿದ್ದಾರೆ.

ಪಡ್ಡೆ ಹುಡುಗರ ನಿದ್ದೆ ಕದ್ದ ಮಾಳವಿಕಾ ಮೋಹನನ್‌ ಒದ್ದೆ ಸೀರೆಯ ಹಾಟ್‌ ಫೋಟೋಸ್‌!

ಆದರೆ ಈ ಪೈಕಿ ಯಾರೊಬ್ಬರನ್ನೂ ಬಂಧಿಸಿಲ್ಲ. ಅದರ ಬದಲು ಸ್ವತಃ ಅರಣ್ಯ ಅಧಿಕಾರಿಗಳೇ ಅವರ ಬಳಿ ಇರುವುದು ನಕಲಿ ಪೆಂಡೆಂಟ್‌, ಇನ್ನು ಜಗ್ಗೇಶ್‌ ಅವರ ಬಳಿ ಇರುವುದು 40 ವರ್ಷದ ಹಿಂದಿನ ಪೆಂಡೆಂಟ್‌ ಎಂದು ಹೇಳುವ ಮೂಲಕ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!