ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

Published : Sep 16, 2024, 04:49 PM IST

ನಾಗಮಂಗಲದಲ್ಲಿ ನಡೆದ ಕೋಮು ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಅವರ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಇಲ್ಲಿದೆ ನೋಡಿ..

ಮಂಡ್ಯ‌ (ಸೆ.16): ನಾಗಮಂಗಲ ಕೋಮು-ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿರೋದು ಹತ್ತಾರು ಅನುಮಾನಗಳನ್ನು ಹುಟ್ಟು ಹಾಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸಂಚಿನ ಶಂಕೆಯೂ ವ್ಯಕ್ತವಾಗಿದೆ. ನಾಗಮಂಗಲ ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಪ್ರಶ್ನೆಗೆ ಚಲುವರಾಯಸ್ವಾಮಿ ಕೊಟ್ಟ ಉತ್ತರವೇನು ಇಲ್ಲಿದೆ ನೋಡಿ. ಮಂಡ್ಯ ಜಿಲ್ಲೆಯಲ್ಲಿ ಶಾಂತವಾಗಿದ್ದ ನಾಗಮಂಗಲದಲ್ಲಿ ಕೋಮು ದಳ್ಳುರಿಯ ಕಿಚ್ಚು ಹೊತ್ತಿಸಿದವರು ಇದೇ ಇಬ್ಬರು ಕೇರಳದ ವ್ಯಕ್ತಿಗಳೇನಾ? ಇವರು ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರೇ ಎಂಬ ಅನುಮಾನ ಕಂಡುಬರುತ್ತಿದೆ.

ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆಂದು 154 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅದರಲ್ಲಿ 74 ಮಂದಿ ಅರೆಸ್ಟ್ ಆಗಿದ್ದಾರೆ. ಎ44 ಯೂಸುಫ್ ಮತ್ತು ಎ61 ನಾಸಿರ್ ಕೇರಳದವರು ಎಂಬುದನ್ನು ಎಫ್ಐಆರ್ ಕಾಪಿಯೇ ಹೇಳ್ತಾ ಇದೆ. ಇವರಿಗೆ ನಿಷೇಧಿತ ಪಿಎಫ್ಐ ಸಂಪರ್ಕ ಇದೆಯೇ ಅನ್ನೋದಷ್ಟೇ ಈಗಿರೋ ಕುತೂಹಲ. ಆ ರಹಸ್ಯವನ್ನು ಭೇದಿಸಲು ಖಾಕಿ ಪಡೆ ಹೆಜ್ಜೆ ಇಟ್ಟಿದೆ.  ಹೀಗಾಗಿ, ರಾಜ್ಯದ ಪೊಲೀಸರು ಈ ಇಬ್ಬರು ಮುಸ್ಲಿಂ ಯುವಕರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯದ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ.

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?