ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

Published : Sep 16, 2024, 04:49 PM IST

ನಾಗಮಂಗಲದಲ್ಲಿ ನಡೆದ ಕೋಮು ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಅವರ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಇಲ್ಲಿದೆ ನೋಡಿ..

ಮಂಡ್ಯ‌ (ಸೆ.16): ನಾಗಮಂಗಲ ಕೋಮು-ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿರೋದು ಹತ್ತಾರು ಅನುಮಾನಗಳನ್ನು ಹುಟ್ಟು ಹಾಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸಂಚಿನ ಶಂಕೆಯೂ ವ್ಯಕ್ತವಾಗಿದೆ. ನಾಗಮಂಗಲ ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಪ್ರಶ್ನೆಗೆ ಚಲುವರಾಯಸ್ವಾಮಿ ಕೊಟ್ಟ ಉತ್ತರವೇನು ಇಲ್ಲಿದೆ ನೋಡಿ. ಮಂಡ್ಯ ಜಿಲ್ಲೆಯಲ್ಲಿ ಶಾಂತವಾಗಿದ್ದ ನಾಗಮಂಗಲದಲ್ಲಿ ಕೋಮು ದಳ್ಳುರಿಯ ಕಿಚ್ಚು ಹೊತ್ತಿಸಿದವರು ಇದೇ ಇಬ್ಬರು ಕೇರಳದ ವ್ಯಕ್ತಿಗಳೇನಾ? ಇವರು ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರೇ ಎಂಬ ಅನುಮಾನ ಕಂಡುಬರುತ್ತಿದೆ.

ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆಂದು 154 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅದರಲ್ಲಿ 74 ಮಂದಿ ಅರೆಸ್ಟ್ ಆಗಿದ್ದಾರೆ. ಎ44 ಯೂಸುಫ್ ಮತ್ತು ಎ61 ನಾಸಿರ್ ಕೇರಳದವರು ಎಂಬುದನ್ನು ಎಫ್ಐಆರ್ ಕಾಪಿಯೇ ಹೇಳ್ತಾ ಇದೆ. ಇವರಿಗೆ ನಿಷೇಧಿತ ಪಿಎಫ್ಐ ಸಂಪರ್ಕ ಇದೆಯೇ ಅನ್ನೋದಷ್ಟೇ ಈಗಿರೋ ಕುತೂಹಲ. ಆ ರಹಸ್ಯವನ್ನು ಭೇದಿಸಲು ಖಾಕಿ ಪಡೆ ಹೆಜ್ಜೆ ಇಟ್ಟಿದೆ.  ಹೀಗಾಗಿ, ರಾಜ್ಯದ ಪೊಲೀಸರು ಈ ಇಬ್ಬರು ಮುಸ್ಲಿಂ ಯುವಕರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯದ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!