ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

Published : Sep 16, 2024, 04:49 PM IST

ನಾಗಮಂಗಲದಲ್ಲಿ ನಡೆದ ಕೋಮು ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಅವರ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಇಲ್ಲಿದೆ ನೋಡಿ..

ಮಂಡ್ಯ‌ (ಸೆ.16): ನಾಗಮಂಗಲ ಕೋಮು-ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿರೋದು ಹತ್ತಾರು ಅನುಮಾನಗಳನ್ನು ಹುಟ್ಟು ಹಾಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸಂಚಿನ ಶಂಕೆಯೂ ವ್ಯಕ್ತವಾಗಿದೆ. ನಾಗಮಂಗಲ ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಪ್ರಶ್ನೆಗೆ ಚಲುವರಾಯಸ್ವಾಮಿ ಕೊಟ್ಟ ಉತ್ತರವೇನು ಇಲ್ಲಿದೆ ನೋಡಿ. ಮಂಡ್ಯ ಜಿಲ್ಲೆಯಲ್ಲಿ ಶಾಂತವಾಗಿದ್ದ ನಾಗಮಂಗಲದಲ್ಲಿ ಕೋಮು ದಳ್ಳುರಿಯ ಕಿಚ್ಚು ಹೊತ್ತಿಸಿದವರು ಇದೇ ಇಬ್ಬರು ಕೇರಳದ ವ್ಯಕ್ತಿಗಳೇನಾ? ಇವರು ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರೇ ಎಂಬ ಅನುಮಾನ ಕಂಡುಬರುತ್ತಿದೆ.

ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆಂದು 154 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅದರಲ್ಲಿ 74 ಮಂದಿ ಅರೆಸ್ಟ್ ಆಗಿದ್ದಾರೆ. ಎ44 ಯೂಸುಫ್ ಮತ್ತು ಎ61 ನಾಸಿರ್ ಕೇರಳದವರು ಎಂಬುದನ್ನು ಎಫ್ಐಆರ್ ಕಾಪಿಯೇ ಹೇಳ್ತಾ ಇದೆ. ಇವರಿಗೆ ನಿಷೇಧಿತ ಪಿಎಫ್ಐ ಸಂಪರ್ಕ ಇದೆಯೇ ಅನ್ನೋದಷ್ಟೇ ಈಗಿರೋ ಕುತೂಹಲ. ಆ ರಹಸ್ಯವನ್ನು ಭೇದಿಸಲು ಖಾಕಿ ಪಡೆ ಹೆಜ್ಜೆ ಇಟ್ಟಿದೆ.  ಹೀಗಾಗಿ, ರಾಜ್ಯದ ಪೊಲೀಸರು ಈ ಇಬ್ಬರು ಮುಸ್ಲಿಂ ಯುವಕರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯದ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!