ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

Published : Sep 16, 2024, 04:49 PM IST

ನಾಗಮಂಗಲದಲ್ಲಿ ನಡೆದ ಕೋಮು ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಅವರ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಇಲ್ಲಿದೆ ನೋಡಿ..

ಮಂಡ್ಯ‌ (ಸೆ.16): ನಾಗಮಂಗಲ ಕೋಮು-ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿರೋದು ಹತ್ತಾರು ಅನುಮಾನಗಳನ್ನು ಹುಟ್ಟು ಹಾಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸಂಚಿನ ಶಂಕೆಯೂ ವ್ಯಕ್ತವಾಗಿದೆ. ನಾಗಮಂಗಲ ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಪ್ರಶ್ನೆಗೆ ಚಲುವರಾಯಸ್ವಾಮಿ ಕೊಟ್ಟ ಉತ್ತರವೇನು ಇಲ್ಲಿದೆ ನೋಡಿ. ಮಂಡ್ಯ ಜಿಲ್ಲೆಯಲ್ಲಿ ಶಾಂತವಾಗಿದ್ದ ನಾಗಮಂಗಲದಲ್ಲಿ ಕೋಮು ದಳ್ಳುರಿಯ ಕಿಚ್ಚು ಹೊತ್ತಿಸಿದವರು ಇದೇ ಇಬ್ಬರು ಕೇರಳದ ವ್ಯಕ್ತಿಗಳೇನಾ? ಇವರು ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರೇ ಎಂಬ ಅನುಮಾನ ಕಂಡುಬರುತ್ತಿದೆ.

ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆಂದು 154 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅದರಲ್ಲಿ 74 ಮಂದಿ ಅರೆಸ್ಟ್ ಆಗಿದ್ದಾರೆ. ಎ44 ಯೂಸುಫ್ ಮತ್ತು ಎ61 ನಾಸಿರ್ ಕೇರಳದವರು ಎಂಬುದನ್ನು ಎಫ್ಐಆರ್ ಕಾಪಿಯೇ ಹೇಳ್ತಾ ಇದೆ. ಇವರಿಗೆ ನಿಷೇಧಿತ ಪಿಎಫ್ಐ ಸಂಪರ್ಕ ಇದೆಯೇ ಅನ್ನೋದಷ್ಟೇ ಈಗಿರೋ ಕುತೂಹಲ. ಆ ರಹಸ್ಯವನ್ನು ಭೇದಿಸಲು ಖಾಕಿ ಪಡೆ ಹೆಜ್ಜೆ ಇಟ್ಟಿದೆ.  ಹೀಗಾಗಿ, ರಾಜ್ಯದ ಪೊಲೀಸರು ಈ ಇಬ್ಬರು ಮುಸ್ಲಿಂ ಯುವಕರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯದ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!