ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

ನಾಗಮಂಗಲ ಗಲಭೆ: ಕೇರಳದ ಇಬ್ಬರು ಆರೋಪಿಗಳ ಲಿಂಕ್ ಬಿಚ್ಚಿಟ್ಟ ಸಚಿವ ಚಲುವರಾಯಸ್ವಾಮಿ!

Published : Sep 16, 2024, 04:49 PM IST

ನಾಗಮಂಗಲದಲ್ಲಿ ನಡೆದ ಕೋಮು ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಅವರ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಇಲ್ಲಿದೆ ನೋಡಿ..

ಮಂಡ್ಯ‌ (ಸೆ.16): ನಾಗಮಂಗಲ ಕೋಮು-ಗಲಭೆಯಲ್ಲಿ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿರೋದು ಹತ್ತಾರು ಅನುಮಾನಗಳನ್ನು ಹುಟ್ಟು ಹಾಕಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸಂಚಿನ ಶಂಕೆಯೂ ವ್ಯಕ್ತವಾಗಿದೆ. ನಾಗಮಂಗಲ ಗಲಭೆಯಲ್ಲಿ ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಪ್ರಶ್ನೆಗೆ ಚಲುವರಾಯಸ್ವಾಮಿ ಕೊಟ್ಟ ಉತ್ತರವೇನು ಇಲ್ಲಿದೆ ನೋಡಿ. ಮಂಡ್ಯ ಜಿಲ್ಲೆಯಲ್ಲಿ ಶಾಂತವಾಗಿದ್ದ ನಾಗಮಂಗಲದಲ್ಲಿ ಕೋಮು ದಳ್ಳುರಿಯ ಕಿಚ್ಚು ಹೊತ್ತಿಸಿದವರು ಇದೇ ಇಬ್ಬರು ಕೇರಳದ ವ್ಯಕ್ತಿಗಳೇನಾ? ಇವರು ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರೇ ಎಂಬ ಅನುಮಾನ ಕಂಡುಬರುತ್ತಿದೆ.

ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದಾರೆಂದು 154 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅದರಲ್ಲಿ 74 ಮಂದಿ ಅರೆಸ್ಟ್ ಆಗಿದ್ದಾರೆ. ಎ44 ಯೂಸುಫ್ ಮತ್ತು ಎ61 ನಾಸಿರ್ ಕೇರಳದವರು ಎಂಬುದನ್ನು ಎಫ್ಐಆರ್ ಕಾಪಿಯೇ ಹೇಳ್ತಾ ಇದೆ. ಇವರಿಗೆ ನಿಷೇಧಿತ ಪಿಎಫ್ಐ ಸಂಪರ್ಕ ಇದೆಯೇ ಅನ್ನೋದಷ್ಟೇ ಈಗಿರೋ ಕುತೂಹಲ. ಆ ರಹಸ್ಯವನ್ನು ಭೇದಿಸಲು ಖಾಕಿ ಪಡೆ ಹೆಜ್ಜೆ ಇಟ್ಟಿದೆ.  ಹೀಗಾಗಿ, ರಾಜ್ಯದ ಪೊಲೀಸರು ಈ ಇಬ್ಬರು ಮುಸ್ಲಿಂ ಯುವಕರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ಯದ ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ರವಾನಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!