ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

Published : Aug 14, 2023, 10:26 AM IST

ಅವರೆಲ್ಲಾ ಕಳೆದ ಹತ್ತಾರು ವರ್ಷಗಳಿಂದ ಇಡೀ ದೇಶವೇ ಹೆಮ್ಮೆ ಪಡುವಂಥ ರಾಷ್ಟ್ರಧ್ವಜದ ಬಟ್ಟೆಯನ್ನ ನೇಯುವ ಕೆಲ್ಸ ಮಾಡ್ತಿದ್ದಾರೆ. ವೇತನ ಕಡಿಮೆ ಇದ್ರೂ ಅವ್ರಲ್ಲಿರೋ ಅಭಿಮಾನದಿಂದ ರಾಷ್ಟ್ರಧ್ವಜಕ್ಕೆ ಬಟ್ಟೆ ನೇಯುತ್ತಾ ಜೀವನ ಕಳಿತಿದ್ದಾರೆ. ಇಷ್ಟಾದ್ರೂ ಯಾರೂ ಅವರ ಕಡೆ ಗಮನ ಕೊಡ್ತಿಲ್ಲ. ಸಾಲದ್ದಕ್ಕೆ ನೇಯ್ಗೆ ಕೇಂದ್ರದಲ್ಲಿ ಹಾವು ಚೇಳುಗಳ ಭರಾಟೆ ಜೋರಾಗಿದೆ. 

ರಾಷ್ಟ್ರಧ್ವಜ ಹಿಡಿದು ಅಭಿಮಾನ ಪಡ್ತಿರೋ ಮಹಿಳೆಯರು ನಮ್ಮ ದೇಶದ ಹೆಮ್ಮೆಯ ನೇಕಾರ (Nekara) ಕುಟುಂಬದವರು. ಇವರಿಗೆ ಕೈ ತುಂಬ ಸಂಬಳವೂ ಇಲ್ಲ. ಸವಲತ್ತು ಗಳೂ ಇಲ್ಲ. ಆದ್ರೂ ದೇಶಾಭಿಮಾನದಿಂದ ರಾಷ್ಟ್ರಧ್ವಜ (National Flag) ನೇಯ್ದು ತಮ್ಮ ಅಭಿಮಾನ ಮೆರೆಯುತ್ತಿದ್ದಾರೆ. ಆದ್ರೆ ಇವರಿಗೆ ಮತ್ತೊಂದು ಹಾವು-ಚೇಳುಗಳ ಕಾಟ ಜೋರಾಗಿದೆ. ಬಾಗಲಕೋಟೆ(Bagalkot) ಜಿಲ್ಲೆಯಲ್ಲಿರೋ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಪ್ರತಿನಿತ್ಯವೂ ರಾಷ್ಟ್ರಧ್ವಜದ ಬಟ್ಟೆಯನ್ನು ನೇಯುವ ಕೆಲ್ಸ ನಡೆಯುತ್ತೇ. ಅಂದಾಜು 50ಕ್ಕೂ ಅಧಿಕ ಜನರು ಇಲ್ಲಿ ನಿತ್ಯ ನೇಕಾರಿಕೆ ಮಾಡ್ತಾರೆ. ಕನಿಷ್ಟ ಕೂಲಿ ಸಹ ಇವರಿಗೆ ಸಿಕ್ತಿಲ್ಲ. ಹಲವು ಬಾರಿ ಕೇಳಿಕೊಂಡರೂ ಅನುದಾನವೂ ಹೆಚ್ಚುತ್ತಿಲ್ಲ, ಯಾರೊಬ್ಬರೂ ಸಹ ಇವರ ಗೋಳು ಕೇಳುತ್ತಿಲ್ಲ. ಇವುಗಳ ಮಧ್ಯೆಯೇ ಬಟ್ಟೆ ನೇಯೋಕೆ ಕೇಂದ್ರಕ್ಕೆ ಬಂದ್ರೆ ಈಗ ಹಾವು, ಚೇಳಿನ ಭಯ ಅತಿಯಾಗಿದೆ. ಕೇಂದ್ರದ ಸುತ್ತಲೂ ಮುಳ್ಳುಕಂಠಿಗಳಿದ್ದು, ಹಾವು ಚೇಳಿನ ಉಪಟಳ ಹೆಚ್ಚಿದೆ. ಜೀವ ಕೈಯಲ್ಲಿಡಿದು ಕೆಲಸ ಮಾಡುವಂತಾಗಿದೆ. ತುಳಸಿಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ(Khadhi Gramodyoga Khendra) ಕೂಲಿ ಕಡಿಮೆ ಇರೋದ್ರಿಂದ ದಿನದಿಂದ ದಿನಕ್ಕೆ ನೇಕಾರರ ಸಂಖ್ಯೆ ಇಳಿಮುಖವಾಗ್ತಿದೆ. ಈ ಹಿಂದೆ 200 ಜನರಿಂದ ನೇಕಾರಿಕೆ ಕೇಂದ್ರದಲ್ಲಿ ಈಗ ಕೇವಲ 50 ಜನ ಕೆಲಸ ಮಾಡ್ತಿದ್ದಾರೆ. ಮೂಲಭೂತ ಸೌಲಭ್ಯಗಳ ಕೊರತೆಯೂ ಇದೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿಕೊಂಡ ನೇಕಾರರು, ಹೊಸ ಯಂತ್ರಗಳ ಜತೆ ನಮಗೆ ಪೆನ್ಷನ್ ನೀಡಿ ಅಂತಿದ್ದಾರೆ.  

ಇದನ್ನೂ ವೀಕ್ಷಿಸಿ:  ರಾಜಧಾನಿಯಲ್ಲಿ ರೌಡಿಸಂ ಹುಟ್ಟಡಗಿಸಲು ಖಾಕಿ ಸಜ್ಜು: ಪುಡಿ ರೌಡಿಗಳ ಮಟ್ಟಹಾಕುವಂತೆ ಕಮಿಷನರ್ ವಾರ್ನ್ !

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more